ಅಮಿತ್ ಶಾ 
ದೇಶ

ಮಹಾದಾಯಿ ವಿಚಾರದಲ್ಲಿ ಅಮಿತ್ ಶಾ ಕಾಂಗರೂ ಕೋರ್ಟ್ ನಂತೆ ವರ್ತಿಸುತ್ತಿದ್ದಾರೆ: ಶಿವಸೇನೆ

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದಶಕಗಳಿಂದ ಇತ್ಯರ್ಥವಾಗದ ಮಹದಾಯಿ ವಿವಾದ ಬಗೆಹರಿಸುವುದಾಗಿ...

ಪಣಜಿ: ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದಶಕಗಳಿಂದ ಇತ್ಯರ್ಥವಾಗದ ಮಹದಾಯಿ ವಿವಾದ ಬಗೆಹರಿಸುವುದಾಗಿ ಹೇಳಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಮಿತ್ರ ಪಕ್ಷ ಶಿವಸೇನೆ ವಾಗ್ದಾಳಿ ನಡೆಸಿದ್ದು, ಬಿಜೆಪಿ ಅಧ್ಯಕ್ಷರು ಕಾಂಗರೂ ಕೋರ್ಟ್(ನೀತಿ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಬೇಕಾದಂತೆ ವಿಚಾರಣೆ ಮಾಡುವುದು)ನಂತೆ ವರ್ತಿಸುತ್ತಿದ್ದಾರೆ ಎಂದು ಮಂಗಳವಾರ ಕಿಡಿಕಾರಿದೆ.
ಅಮಿತ್ ಶಾ ಹೇಳಿಕೆ ಸಂಪೂರ್ಣ ಗೋವಾ ಜನತೆಯ ವಿರುದ್ಧವಾಗಿದ್ದು, ಅವರು ಕಾಂಗರೂ ಕೋರ್ಟ್ ರೀತಿ ವರ್ತಿಸುತ್ತಿದ್ದಾರೆ ಮತ್ತು ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೇ ತೀರ್ಪು ನೀಡುತ್ತಿದ್ದಾರೆ ಎಂದು ಶಿವಸೇನೆಯ ಗೋವಾ ಘಟಕ ಆರೋಪಿಸಿದೆ.
ಗೋವಾ ಮತ್ತು ಕರ್ನಾಟಕ ನಡುವಿನ ವಿವಾದ ಬಗೆಹರಿಸುವ ಅಧಿಕಾರ ಗುಜರಾತ್ ನ ಅಮಿತ್ ಶಾಗೆ ನೀಡಿದವರು ಯಾರು?  ನಮ್ಮ ನೀರಿನ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಅವರು ಯಾರು? ಎಂದು ಶಿವಸೇನೆ ವಕ್ತಾರೆ ರಾಖಿ ಪ್ರಭುದೇಸಾಯಿ ನಾಯಕ್ ಅವರು ಪ್ರಶ್ನಿಸಿದ್ದಾರೆ.
ಮಹಾದಾಯಿ ವಿವಾದ ನ್ಯಾಯಾಧೀಕರಣದಲ್ಲಿರುಬೇಕಾದರೆ ಅಮತ್ ಶಾ ಹೇಗೆ ಕಾಂಗರೂ ಕೋರ್ಟ್ ರೀತಿ ತೀರ್ಪು ನೀಡುತ್ತಾರೆ ಎಂದು ನಾಯಕ್ ಪ್ರಶ್ನಿಸಿದ್ದಾರೆ.
ನಿನ್ನೆಯಷ್ಟೇ ಅಮಿತ್ ಶಾ ಅವರು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರ ಮಹಾದಾಯಿ ವಿವಾದ ಪರಿಹರಿಸುವುದಾಗಿ ಭರವಸೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT