ಸಾಂದರ್ಭಿಕ ಚಿತ್ರ 
ದೇಶ

20 ಆಪ್‌ ಶಾಸಕರ ಅನರ್ಹತೆ: ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್‌

ಲಾಭದಾಯಕ ಹುದ್ದೆ ಹೊಂದಿದ್ದ ಆರೋಪದ ಮೇಲೆ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು....

ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ್ದ ಆರೋಪದ ಮೇಲೆ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಆಪ್‌ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬುಧವಾರ ಪೂರ್ಣಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. 
ಅನರ್ಹತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಮತ್ತು ನ್ಯಾಯಮೂರ್ತಿ ಚಂದರ್‌ ಶೇಖರ್‌ ಅವರನ್ನೊಳಗೊಂಡ ಪೀಠ, ಆಪ್‌ ಶಾಸಕರು, ಚುನಾವಣಾ ಆಯೋಗ ಮತ್ತು ಇತರ ಸಂಬಂಧಿತ ಪಕ್ಷಗಳು ವಾದ-ಪ್ರತಿವಾದ ಮುಗಿಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದೆ.
ವಾದ-ಪ್ರತಿವಾದಗಳನ್ನು ಆಲಿಸಲಾಗಿದೆ ಮತ್ತು ತೀರ್ಪನ್ನು ಕಾದಿರಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಆಮ್ ಆದ್ಮಿ ಪಕ್ಷದ 20 ಶಾಸಕರು ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೂಲಕ ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತ್ತು. ಬಳಿಕ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಶಿಫಾರಸಿಗೆ ಸಹಿ ಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT