ಸಂಗ್ರಹ ಚಿತ್ರ 
ದೇಶ

ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ನಿಧನ

ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಧೀರ್ಘಕಾಲಿಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜಯೇಂದ್ರ ಸರಸ್ವತಿ ಅವರು ಇಂದು ಬೆಳಗ್ಗೆ ನಿಧನರಾಗಿದ್ದು, ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಾಂಚಿಪುರನಲ್ಲಿರುವ ಕಂಚಿ ಕಾಮಕೋಟಿ ಮಠದ 69ನೇ ಶಂಕರಾಚಾರ್ಯ ಗುರುಗಳಾಗಿದ್ದರು.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಚೆನ್ನೈನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಂಚಿ ಕಾಮಕೋಟಿ ಪೀಠದ 69ನೇ ಪೀಠಾಧಿಪತಿಗಳಾಗಿದ್ದ ಜಯೇಂದ್ರ ಸರಸ್ವತಿ ಸ್ವಾಮೀಜಿಯನ್ನು 1954ರ ಮಾರ್ಚ್ 22ರಂದು ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಶಿಷ್ಯರನ್ನಾಗಿ ಸ್ವೀಕರಿಸಿದ್ದರು. 1994ರಲ್ಲಿ ಹಿರಿಯ ಗುರುಗಳು ಮುಕ್ತರಾದ ನಂತರ ಪೀಠದ ಸಂಪೂರ್ಣ ಹೊಣೆ ಹೊತ್ತಿದ್ದರು.

ತಂಜಾವೂರು ಜಿಲ್ಲೆಯ ಇರುಲ್​ನಕ್ಕಿ ಎಂಬಲ್ಲಿ 1935ರ ಜುಲೈ 18ರಂದು ಜನಿಸಿದ್ದ ಶ್ರೀಗಳ ಪೂರ್ವಾಶ್ರಮದ ಹೆಸರು ಸುಬ್ರಮಣಿಯಂ. ಮಹಾದೇವ ಅಯ್ಯರ್​, ಸರಸ್ವತಿ ದಂಪತಿಯ ಹಿರಿಯ ಪುತ್ರರಾಗಿರುವ ಅವರು, ವಿಲ್ಲುಪುರಂ ಎಲಿಮೆಂಟರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರು.

1943ರ ಮೇ 9ರಂದು ಬ್ರಹ್ಮೋಪದೇಶ ಪಡೆದ ಶ್ರೀಗಳು, ಶಂಕರಾಚಾರ್ಯ ಮಠದ ಜಗದ್ಗುರು ವಿದ್ಯಾಸಂಸ್ಥಾನದಲ್ಲಿ ವೇದಾಧ್ಯಯನ ಮಾಡಿ 1948ರ ವೇಳೆಗೆ ಋಗ್ವೇದ ಸಂಹಿತಾ ಅಧ್ಯಯನ ಪೂರ್ಣಗೊಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT