ಸಂಗ್ರಹ ಚಿತ್ರ 
ದೇಶ

ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ನಿಧನ

ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಧೀರ್ಘಕಾಲಿಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜಯೇಂದ್ರ ಸರಸ್ವತಿ ಅವರು ಇಂದು ಬೆಳಗ್ಗೆ ನಿಧನರಾಗಿದ್ದು, ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಾಂಚಿಪುರನಲ್ಲಿರುವ ಕಂಚಿ ಕಾಮಕೋಟಿ ಮಠದ 69ನೇ ಶಂಕರಾಚಾರ್ಯ ಗುರುಗಳಾಗಿದ್ದರು.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಚೆನ್ನೈನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಂಚಿ ಕಾಮಕೋಟಿ ಪೀಠದ 69ನೇ ಪೀಠಾಧಿಪತಿಗಳಾಗಿದ್ದ ಜಯೇಂದ್ರ ಸರಸ್ವತಿ ಸ್ವಾಮೀಜಿಯನ್ನು 1954ರ ಮಾರ್ಚ್ 22ರಂದು ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಶಿಷ್ಯರನ್ನಾಗಿ ಸ್ವೀಕರಿಸಿದ್ದರು. 1994ರಲ್ಲಿ ಹಿರಿಯ ಗುರುಗಳು ಮುಕ್ತರಾದ ನಂತರ ಪೀಠದ ಸಂಪೂರ್ಣ ಹೊಣೆ ಹೊತ್ತಿದ್ದರು.

ತಂಜಾವೂರು ಜಿಲ್ಲೆಯ ಇರುಲ್​ನಕ್ಕಿ ಎಂಬಲ್ಲಿ 1935ರ ಜುಲೈ 18ರಂದು ಜನಿಸಿದ್ದ ಶ್ರೀಗಳ ಪೂರ್ವಾಶ್ರಮದ ಹೆಸರು ಸುಬ್ರಮಣಿಯಂ. ಮಹಾದೇವ ಅಯ್ಯರ್​, ಸರಸ್ವತಿ ದಂಪತಿಯ ಹಿರಿಯ ಪುತ್ರರಾಗಿರುವ ಅವರು, ವಿಲ್ಲುಪುರಂ ಎಲಿಮೆಂಟರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರು.

1943ರ ಮೇ 9ರಂದು ಬ್ರಹ್ಮೋಪದೇಶ ಪಡೆದ ಶ್ರೀಗಳು, ಶಂಕರಾಚಾರ್ಯ ಮಠದ ಜಗದ್ಗುರು ವಿದ್ಯಾಸಂಸ್ಥಾನದಲ್ಲಿ ವೇದಾಧ್ಯಯನ ಮಾಡಿ 1948ರ ವೇಳೆಗೆ ಋಗ್ವೇದ ಸಂಹಿತಾ ಅಧ್ಯಯನ ಪೂರ್ಣಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT