ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಬಂಧನ ಸೇಡಿನ ರಾಜಕೀಯ ಮತ್ತು ಮೋದಿ ಸರ್ಕಾರ ತನ್ನ ಹಗರಣಗಳನ್ನು ಮುಚ್ಚಿಕೊಳ್ಳಲು ವಿಷಯಾಂತರ ತಂತ್ರ ಅನುಸರಿಸುತ್ತಿದೆ ಎಂದು ಬುಧವಾರ ಕಾಂಗ್ರೆಸ್ ಆರೋಪಿಸಿದೆ.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಅವರನ್ನು ಸಿಬಿಐ ಬಂಧಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೆವಾಲಾ ಅವರು, ಕೇಂದ್ರ ಸರ್ಕಾರ ತನ್ನ ಭ್ರಷ್ಟಾಚಾರದ ಹಗರಣಗಳನ್ನು ಮತ್ತು ಕೆಟ್ಟ ಹಾಗೂ ದುರಾಡಳಿತವನ್ನು ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರ ಅಷ್ಟೆ ಎಂದಿದ್ದಾರೆ.
ಪಿ ಚಿದಂಬರಂ ಅಥವಾ ಅವರ ಪುತ್ರನ ವಿರುದ್ಧ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದ್ದು, ಇದಕ್ಕೆ ಕಾಂಗ್ರೆಸ್ ಹೆದರುವುದಿಲ್ಲ. ನಾವು ಸತ್ಯ ಹೇಳುವುದನ್ನು ಮುಂದುವರೆಸುತ್ತೇವೆ ಮತ್ತು ಮೋದಿ ಸರ್ಕಾರ ಹಗರಣಗಳನ್ನು ಬಯಲಿಗೆಳೆಯುವುದನ್ನು ನಿಲ್ಲಿಸುವುದಿಲ್ಲ ಎಂದು ಸುರ್ಜೆವಾಲಾ ಹೇಳಿದ್ದಾರೆ.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಕಳೆದ ವರ್ಷ ಮೇ 15ರಂದು ಎಫ್ಐಆರ್ ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರ್ತಿ ಚಿದಂಬರಂ ಅವರನ್ನು ಇಂದು ಬಂಧಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos