ರಂದೀಪ್ ಸುರ್ಜೆವಾಲಾ 
ದೇಶ

ಕಾರ್ತಿ ಚಿದಂಬರಂ ಬಂಧನ ಸೇಡಿನ ರಾಜಕೀಯ, ವಿಷಯಾಂತರ ತಂತ್ರ: ಕಾಂಗ್ರೆಸ್

ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಬಂಧನ ಸೇಡಿನ ರಾಜಕೀಯ...

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಬಂಧನ ಸೇಡಿನ ರಾಜಕೀಯ ಮತ್ತು ಮೋದಿ ಸರ್ಕಾರ ತನ್ನ ಹಗರಣಗಳನ್ನು ಮುಚ್ಚಿಕೊಳ್ಳಲು ವಿಷಯಾಂತರ ತಂತ್ರ ಅನುಸರಿಸುತ್ತಿದೆ ಎಂದು ಬುಧವಾರ ಕಾಂಗ್ರೆಸ್ ಆರೋಪಿಸಿದೆ.
 ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಅವರನ್ನು ಸಿಬಿಐ ಬಂಧಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೆವಾಲಾ ಅವರು, ಕೇಂದ್ರ ಸರ್ಕಾರ ತನ್ನ ಭ್ರಷ್ಟಾಚಾರದ ಹಗರಣಗಳನ್ನು ಮತ್ತು ಕೆಟ್ಟ ಹಾಗೂ ದುರಾಡಳಿತವನ್ನು ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರ ಅಷ್ಟೆ ಎಂದಿದ್ದಾರೆ.
ಪಿ ಚಿದಂಬರಂ ಅಥವಾ ಅವರ ಪುತ್ರನ ವಿರುದ್ಧ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದ್ದು, ಇದಕ್ಕೆ ಕಾಂಗ್ರೆಸ್ ಹೆದರುವುದಿಲ್ಲ. ನಾವು ಸತ್ಯ ಹೇಳುವುದನ್ನು ಮುಂದುವರೆಸುತ್ತೇವೆ ಮತ್ತು ಮೋದಿ ಸರ್ಕಾರ ಹಗರಣಗಳನ್ನು ಬಯಲಿಗೆಳೆಯುವುದನ್ನು ನಿಲ್ಲಿಸುವುದಿಲ್ಲ ಎಂದು ಸುರ್ಜೆವಾಲಾ ಹೇಳಿದ್ದಾರೆ.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಕಳೆದ ವರ್ಷ ಮೇ 15ರಂದು ಎಫ್ಐಆರ್ ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರ್ತಿ ಚಿದಂಬರಂ ಅವರನ್ನು ಇಂದು ಬಂಧಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT