ಅರುಣ್ ಜೆಟ್ಲಿ 
ದೇಶ

ಸುಸ್ತಿದಾರರ ಆಸ್ತಿ ಜಪ್ತಿ: ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಮಸೂದೆ 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಸುಸ್ತಿದಾರರ ಆಸ್ತಿ ಜಪ್ತಿ ಮಾಡುವುದಕ್ಕೆ ಅನುವು ಮಾಡಿಕೊಡುವ ದೇಶ ತೊರೆದ ಆರ್ಥಿಕ ಅಪರಾಧಿಗಳ ಮಸೂದೆ- 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ನವದೆಹಲಿ: ಸುಸ್ತಿದಾರರ ಆಸ್ತಿ ಜಪ್ತಿ ಮಾಡುವುದಕ್ಕೆ ಅನುವು ಮಾಡಿಕೊಡುವ ದೇಶ ತೊರೆದ ಆರ್ಥಿಕ ಅಪರಾಧಿಗಳ ಮಸೂದೆ- 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. 
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 12 ಸಾವಿರ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ನೀರವ್ ಮೋದಿಯನ್ನು ವಾಪಸ್ ಕರೆತರಲು ಕಷ್ಟಸಾಧ್ಯವಾಗಿರುವಾಗಲೇ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಇಂತಹ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಮಸೂದೆ ಸಹಕಾರಿಯಾಗಲಿದೆ. 
ಸಚಿವ ಸಂಪುಟ ಸಭೆಯ ಬಳಿಕ ಅರುಣ್ ಜೆಟ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಆರ್ಥಿಕ ಅಪರಾಧಿಗಳ ಬೇನಾಮಿ ಸೇರಿದಂತೆ ಎಲ್ಲಾ ಆಸ್ತಿಗಳನ್ನು ವಶಪಡಿಸಿಕೊಳ್ಳುವುದಕ್ಕೆ ಈ ಮಸೂದೆ ಸಹಕಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ದೇಶದಲ್ಲಷ್ಟೇ ಅಲ್ಲದೇ ವಿದೇಶಗಳಲ್ಲಿರುವ ಆಸ್ತಿಯನ್ನೂ ವಶಪಡಿಸಿಕೊಳ್ಳಲು ಈ ಮಸೂದೆ ಅನುವು ಮಾಡಿಕೊಡಲಿದೆ.  ಆದರೆ ಇದಕ್ಕೂ ಮುನ್ನ ಆಯಾ ದೇಶಗಳೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಳ್ಳಬೇಕೆಂದು ಜೇಟ್ಲಿ ತಿಳಿಸಿದ್ದಾರೆ. ಮಸೂದೆಯನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT