ಸಂಗ್ರಹ ಚಿತ್ರ 
ದೇಶ

ಸೇನೆಗೆ ಮತ್ತಷ್ಟು ಬಲ; 41 ಸಾವಿರ ಲೈಟ್ ಮಷಿನ್ ಗನ್ ಗಳ ಖರೀದಿಗೆ ಕೇಂದ್ರ ಸಮ್ಮತಿ

ಭಾರತೀಯ ಸೇನೆಯನ್ನು ಮತ್ತಷ್ಟ ಬಲಿಷ್ಟ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಬರೊಬ್ಬರಿ 41 ಸಾವಿರ ಲೈಟ್ ಮಷಿನ್ ಗನ್ ಗಳನ್ನು ಖರೀದಿ ಮಾಡಲು ನಿರ್ಧಸಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಭಾರತೀಯ ಸೇನೆಯನ್ನು ಮತ್ತಷ್ಟ ಬಲಿಷ್ಟ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಬರೊಬ್ಬರಿ 41 ಸಾವಿರ ಲೈಟ್ ಮಷಿನ್ ಗನ್ ಗಳನ್ನು ಖರೀದಿ ಮಾಡಲು ನಿರ್ಧಸಿದೆ ಎಂದು ತಿಳಿದುಬಂದಿದೆ.
ಮೂಲಗಳ  ಪ್ರಕಾರ ಕೇಂದ್ರ ರಕ್ಷಣಾ ಸಚಿವಾಲಯ ಸುಮಾರು  9,435 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ  ಅನುಮೋದನೆ ನೀಡಿದ್ದು, ಈ ಪೈಕಿ 41 ಸಾವಿರ ಲೈಟ್ ಮಷಿನ್ ಗಳು, 3.5 ಲಕ್ಷ ಕಾರ್ಬೈನ್ ಗಳು ಸೇರಿದಂತೆ ವಿವಿಧ ಉಪಕರಣಗಳನ್ನು ಖರೀದಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಪ್ರಮುಖವಾಗಿ ಹಾಲಿ ಖರೀದಿಯಲ್ಲಿ ಭಾರತದ ಕಾಲ್ದಳ ಅಂದರೆ ಭೂಸೇನಾ ಪಡೆಗಳಿಗೆ ಅಗತ್ಯವಾದ ಶಸ್ತ್ರಾಸ್ತ್ರಗಳ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ನಿನ್ನೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃಕತ್ವದಲ್ಲಿ ನಡೆದ ರಕ್ಷಣಾ ಖರೀದಿ ಮಂಡಳಿ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದ್ದು. ಸುಮಾರು 3 ಸಾವಿರ ಕೋಟಿ ರೂ ವೆಚ್ಚದಲ್ಲಿ 41 ಸಾವಿರ ಲೈಟ್ ಮಷಿನ್ ಗನ್ ಗಳು, 4, 607 ಕೋಟಿ ರೂ. ವೆಚ್ಚದಲ್ಲಿ 3.5 ಲಕ್ಷ ಕಾರ್ಬೈನ್ ಗಳನ್ನು ಖರೀದಿ ಮಾಡಲು ಒಪ್ಪಿಗೆ ನೀಡಲಾಗಿದೆ. ಪ್ರಮುಖವಾಗಿ ಭಾರತ ಮತ್ತು ಚೀನಾ ಗಡಿಗಳಲ್ಲಿರುವ ಸೈನಿಕರನ್ನು ಕೇಂದ್ರವಾಗಿರಿಸಿಕೊಂಡು ಈ ಖರೀದಿಗೆ ಒಪ್ಪಿಗೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. 
ಕಳೆದ ಫೆಬ್ರವರಿ 13ರಂದು ಸಭೆ ನಡೆಸಿದ್ದ ರಕ್ಷಣಾ ಖರೀದಿ ಮಂಡಳಿ 15,935 ಕೋಟಿ ವೆಚ್ಚದಲ್ಲಿ 7.40 ಲಕ್ಷ ಅಸಾಲ್ಟ್ ರೈಫಲ್ ಗಳನ್ನು ಮತ್ತು 5,719 ಸ್ನೈಪರ್ ರೈಫಲ್ ಗಳನ್ನು ಖರೀದಿಸುವ ಕುರಿತು ಅನುಮತಿ ನೀಡಿತ್ತು. ಈ ಪೈಕಿ ಅಂದರೆ ಕಳೆದ ಪೆಬ್ರವರಿ 13 ಮತ್ತು ನಿನ್ನೆ ನಡೆದ ಸಭೆಯಲ್ಲಿನ ತೀರ್ಮಾನದಂತೆ ಭಾರತ ಖರೀದಿಸಲು ಅನುಮತಿ ನೀಡಿರುವ ಶಸ್ತ್ರಾಸ್ತ್ರಗಳ ಪೈಕಿ ಶೇ.75ರಷ್ಟು ಶಸ್ತ್ರಾಸ್ತ್ರಗಳನ್ನು ಭಾರತದಲ್ಲೇ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ದಾವಣಗೆರೆ-ಹರಿಹರ ಅವಳಿ ನಗರ ಅಭಿವೃದ್ಧಿಗೆ 'ಮಾಸ್ಟರ್ ಪ್ಲಾನ್ 2041' ಕ್ಕೆ ಸರ್ಕಾರದ ಅನುಮೋದನೆ!

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ