ರಾಮಜನ್ಮಭೂಮಿ ಸೇರಿ ಒಂಭತ್ತು ವಿವಾದಿತ ಸ್ಥಳಗಳನ್ನು ಹಿಂದೂಗಳಿಗೆ ಮರಳಿಸಿ: ಶಿಯಾ ವಕ್ಫ್ ಬೋರ್ಡ್ 
ದೇಶ

ರಾಮಜನ್ಮಭೂಮಿ ಸೇರಿ ಒಂಭತ್ತು ವಿವಾದಿತ ಸ್ಥಳಗಳನ್ನು ಹಿಂದೂಗಳಿಗೆ ಮರಳಿಸಿ: ಶಿಯಾ ವಕ್ಫ್ ಬೋರ್ಡ್

ಹಿಂದೂ ದೇವಾಲಯಗಳನ್ನು ನಾಶಪಡಿಸಿ ಅದರ ಮೇಲೆ ಕಟ್ಟಲಾದ ಮಸೀದಿಗಳನ್ನು ಹಿಂದೂಗಳಿಗೆ ಹಿಂತಿರುಗಿಸಬೇಕು ಎಂದು ಉತ್ತರ ಪ್ರದೇಶದ........

ಲಖನೌ(ಉತ್ತರ ಪ್ರದೇಶ): ಹಿಂದೂ ದೇವಾಲಯಗಳನ್ನು ನಾಶಪಡಿಸಿ ಅದರ ಮೇಲೆ ಕಟ್ಟಲಾದ ಮಸೀದಿಗಳನ್ನು ಹಿಂದೂಗಳಿಗೆ ಹಿಂತಿರುಗಿಸಬೇಕು ಎಂದು  ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ವಸೀಮ್ ರಿಜ್ವಿ ಹೇಳಿದ್ದಾರೆ.
ಅಯೋಧ್ಯಾದ ರಾಮಜನ್ಮಭೂಮಿ ಸೇರಿ ಒಟ್ಟು ಒಂಭತ್ತು ವಿವಾದಿತ ಪ್ರದೇಶಗಳನ್ನು ಹಿಂದೂಗಳಿಗೆ ಮರಳಿಸಬೇಕೆಂದು ಮುಸ್ಲಿಂ ಬೋರ್ಡ್ ಗೆ ಒತ್ತಾಯಿಸಿದ್ದಾರೆ. ಅವರು ಆಲ್-ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ (ಎಐಐಪಿಪಿಬಿ) ಅಧ್ಯಕ್ಷ ಮೌಲಾನಾ ರಾಬಿ ಹಸನ್ ನಾದ್ವಿ ಅವರಿಗೆ ಬರೆದ ಪತ್ರದಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದ್ದಾರೆ.
ಇತರರ ಧಾರ್ಮಿಕ ಸ್ಥಳಗಳನ್ನು ನಾಶಪಡಿಸಿ ಮಸೀದಿ ನಿರ್ಮಣ ಮಾಡುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂಡು ರಿಜ್ವಿ ಅಭಿಪ್ರಾಯ ಪಟ್ಟಿದ್ದಾರೆ. ರಿಜ್ವಿ ತಮ್ಮ ಪತ್ರದಲ್ಲಿ ದೇಶದಾದ್ಯಂತ ಇರುವ ಒಂಭತ್ತು ಧಾರ್ಮಿಕ ವಿವಾದಾತ್ಮಕ ಸ್ಥಳಗಳ ಹೆಸರನ್ನು ಪಟ್ಟಿ ಮಾಡಿದ್ದಾರೆ.
ಅಯೋಧ್ಯಾದ ಬಾಬರಿ ಮಸೀದಿ, ಮಥುರಾದ ಕೇಶವ ಮಂದಿರ, ವಾರಣಾಸಿಯ ವಿಶ್ವನಾಥ ದೇವಾಲಯ, ಜೌನ್ ಪುರದಲ್ಲಿನ ಅಟಲ್  ದೇವ ಮಂದಿರ, ಗುಜರಾತಿನ ಭಾತ್ನಾದ ರುದ್ರ ಮಹಾಲಯ ಮಂದಿರ, ಅಹಮದಾಬಾದ್ ನ ಭದ್ರಕಾಳಿ ಮಂದಿರ, ಪಶ್ಚಿಮ ಬಂಗಾಳದ ಪಾಂಡುವಾದಲ್ಲಿನ ಅದೀನಾ ಮಸೀದಿ, ಮಧ್ಯ ಪ್ರದೇಶದ ವಿದಿಷಾದ ವಿಜಯಾ ದೇವಿ ಮಂದಿರ ಮತ್ತು ದೆಹಲಿಯ ಕುತುಬ್ ಮಿನಾರ್ ಮಸೀದಿಗಳನ್ನು ಹಿಂದುಗಳಿಗೆ ಹಸ್ತಾಂತರಿಸಬೇಕೆಂದು ಪತ್ರದಲ್ಲಿ ಆಗ್ರಹಿಸಲಾಗಿದೆ.
ಅಯೋಧ್ಯೆಯ ಒಂಭತ್ತು ಮಸೀದಿಗಳು ಮೊಘಲರ ಕಾಲದಲ್ಲಿ ನಿರ್ಮಾಣಗೊಂಡಿದ್ದು ಇದೆಲ್ಲವೂ ಹಿಂದೂ ದೇವಾಲಯಗಳನ್ನು ನಾಶಗೊಳಿಸಿ ನಿರ್ಮಾಣ ಆಗಿವೆ. ಇಷ್ಟಕ್ಕೂ ಇದು ಮುಸ್ಲೀಂ ಕಾನೂನಿ ರಿತಿಯಾಗಿ ನ್ಯಾಯಸಮ್ಮತವಾಗಿದೆಯೆ ಎಂದು ನಾನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಗೆ ಕೇಲಲು ಬಯಸುತ್ತೇನೆ ಎಂದು .ರಿಜ್ವಿ ಎಎನ್ ಐಗೆ ತಿಳಿಸಿದ್ದಾರೆ.
"ಅದೊಮ್ಮೆ ಅವೆಲ್ಲವೂ ನ್ಯಾಯಸಮ್ಮತವಾಗಿದ್ದಲ್ಲಿ ಸರಿ, ಹಾಗಿಲ್ಲವಾದರೆ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಬೇಕಾಗುವುದು. ಮತ್ತು ಒಮ್ಮತಾಭಿಪ್ರಾಯಕ್ಕೆ ಬರಬೇಕಾಗುತ್ತದೆ." ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT