ಮಧು ಖೋಡಾ 
ದೇಶ

ಕಲ್ಲಿದ್ದಲು ಹಗರಣ: ಮಧು ಖೋಡಾ ಶಿಕ್ಷೆಗೆ ದೆಹಲಿ ಹೈ ಕೋರ್ಟ್ ತಡೆಯಾಜ್ಞೆ

ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾಗೆ ವಿಶೇಷ ನ್ಯಾಯಾಲಯ ನೀಡಿದ್ದ ಮೂರು ವರ್ಷಗಳ ಜೈಲುವಾಸ ಶಿಕ್ಷೆಗೆ.......

ನವದೆಹಲಿ: ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾಗೆ ವಿಶೇಷ  ನ್ಯಾಯಾಲಯ ನೀಡಿದ್ದ ಮೂರು ವರ್ಷಗಳ ಜೈಲುವಾಸ ಶಿಕ್ಷೆಗೆ ದೆಹಲಿ ಹೈ ಹೈಕೋರ್ಟ್ ತಡೆಯಾಜ್ಞೆ ನೀಡಿದೆ .ಸಿಬಿಐ ಮನವಿಯ ಹಿನ್ನೆಲೆಯಲ್ಲಿ ತಡೆಯಾಜ್ಞೆ ನಿಡಲಾಗಿದ್ದು ಜ.22ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.
ನ್ಯಾಯಮೂರ್ತಿ ಅನು ಮಲ್ಹೋತ್ರ ಅವರು ಖೋಡಾ ಅವರಿಗೆ 25 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.ಇನ್ನು ಈ ತಿಂಗಳಿರುವ ಮುಂದಿನ ವಿಚಾರಣೆವರೆಗೆ ಅವರು ದೇಶ ಬಿಟ್ಟು ತೆರಳುವಂತಿಲ್ಲ ಎನ್ನುವ ಷರತ್ತಿನ ಮೇಲೆ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.  ತಮ್ಮ ಶಿಕ್ಷೆಯನ್ನು ಅಮಾನತ್ತಿನಲ್ಲಿಡಬೇಕು, ಮುಂದಿನ ವಿಚಾರಣೆವರೆಗೆ ಜಾಮೀನು ನೀಡಬೇಕೆಂದು ಕೋರಿ ಖೋಡಾ ಹೈ ಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದರು.
ಕೊಲ್ಕತ್ತಾ ಮೂಲದ ಕಂಪೆನಿ ವಿನಿ ಐರನ್ ಮತ್ತು ಸ್ಟೀಲ್ ಉದ್ಯೋಗ್ ಲಿಮಿಟೆಡ್ (ವಿಐಎಸ್ ಯುಎಲ್) ಗೆ ಜಾರ್ಖಂಡ್ ಮೂಲದ ಕಲ್ಲಿದ್ದಲು ಬ್ಲಾಕ್ನ ವಿತರಣೆಯಲ್ಲಿ ಭ್ರಷ್ಟಾಚಾರ ಮತ್ತು ಪಿತೂರಿ ನಡೆಸಿದ್ದಾರೆ, ಇದು ಶಿಕ್ಷಾರ್ಹ ಅಪರಾಧ ಎನ್ನುವುದನ್ನು ಕೋರ್ಟ್ ಒಪ್ಪಿಕೊಂಡಿದೆ.ಈ ಹಿಂದೆ ವಿಶೇಷ ನ್ಯಾಯಾಲಯ ಖೋಡಾ ಅವರಿಗೆ ಜ.18ರವರೆಗೆ ಜಾಮೀನು ನೀಡಿ ಆದೇಶಿಸಿತ್ತು.
ಇದೀಗ ಹೈ ಕೋರ್ಟ್ ಅವರಿಗೆ 22ರವರೆಗೆ ಜಾಮೀನು ನೀಡಿದ್ದು ಖೇಡಾ ತುಸು ನಿರಾಳವಾಗುವಂತೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT