ಕೊಯಮತ್ತೂರು: ಸ್ನಾನ ಮಾಡದ್ದಕ್ಕೆ ತಂದೆಯಿಂದ ಬೈಗುಳ; ಬಾಲಕನ ಆತ್ಮಹತ್ಯೆ 
ದೇಶ

ಕೊಯಮತ್ತೂರು: ಸ್ನಾನ ಮಾಡದ್ದಕ್ಕೆ ತಂದೆಯಿಂದ ಬೈಗುಳ; ಬಾಲಕನ ಆತ್ಮಹತ್ಯೆ

ಹೊಸ ವರ್ಷದಂದು ಮಗ ಸ್ನಾನ ಮಾಡಲಿಲ್ಲ ಎಂದು ಬೇಶರಗೊಂಡು ತಂದೆ ಮಗನಿಗೆ ಸ್ನಾನ ಮಾಡುವಂತೆ ಹೇಳಿ ಗದರಿದ್ದಾರೆ.

ಕೊಯಮತ್ತೂರ್: ಹೊಸ ವರ್ಷದಂದು ಮಗ ಸ್ನಾನ ಮಾಡಲಿಲ್ಲ ಎಂದು ಬೇಶರಗೊಂಡು ತಂದೆ ಮಗನಿಗೆ ಸ್ನಾನ ಮಾಡುವಂತೆ ಹೇಳಿ ಗದರಿದ್ದಾರೆ.ಇದರಿಂದ ಮನನೊಂದ ಮಗ ನೇಣಿಗೆ ಶರಣಾಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.
ಐದನೇ ತರಗತಿ ಓದುತ್ತಿದ್ದ ಹತ್ತು ವರ್ಷದ ವಾಲಕ ನೇಣಿಗೆ ಶರಣಾಗಿದ್ದು ತಂದೆ ಸ್ನಾನ ಮಾಡುವಂತೆ ಗದರಿದ ಸಮಯದಲ್ಲಿ ಅವನು ತನ್ನ ಸ್ನೇಹಿತರೊಡನೆ ಆಟವಾಡುತ್ತಿದ್ದ ಎಂದು ಪೋಲೀಸರು ತಿಳಿಸಿದ್ದಾರೆ.
ಹಾಗೆ ಗದರಿದ ನಂತರ ಬಾಲಕ ಅರ್ಧ ಮನಸ್ಸಿನಿಂದ ಸ್ನಾನಕ್ಕಾಗಿ ಬಾತ್ ರೂಂ ಗೆ ತೆರಳಿದ್ದಾನೆ. ಅಲ್ಲಿ ಟವೆಲ್ ಹಾಗೂ ಅಪಿಪ್ ನ್ನು ಬಳಸಿ ನೇಣು ಬಿಗಿದುಕೊಂಡಿದ್ದಾನೆ. ಪಾಲಕರು ಮಗ ಎಷ್ಟು ಹೊತ್ತಾದರೂ ಬಾತ್ ರೂಂ ನಿಂದ ಹೊರಬರದೆ ಇದ್ದದ್ದು ಕಂಡು ಗಾಬರಿಯಾಗಿ ಬಾಗಿಲು ಒಡೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಅವರು ಮಗನನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕ ಸತ್ತಿದ್ದು ವೈದ್ಯರು ಅದನ್ನು ದೃಢಪಡಿಸಿದ್ದರು. 
ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ ಎಂದು ಪೋಲೀಸರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT