ಮನೋಹರ್ ಪರಿಕ್ಕರ್ 
ದೇಶ

ಮಹದಾಯಿ ವಿವಾದ; ಕರ್ನಾಟಕ ತನ್ನ ಪಾಲಿನ ನೀರು ಪಡೆಯುವುದು ಅನಿವಾರ್ಯ: ಗೋವಾ ಸಿಎಂ

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ತೀವ್ರ ಟೀಕೆಗೆ....

ಪಣಜಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ತೀವ್ರ ಟೀಕೆಗೆ ಕಾರಣವಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕರ್ನಾಟಕ ತನ್ನ ಪಾಲಿನ ನೀರು ಪಡೆಯುವುದು ಅನಿವಾರ್ಯವಾಗಿದೆ ಎಂದು ಗುರುವಾರ ಹೇಳಿದ್ದಾರೆ.
ಇಂದು ಸಚಿವಾಲಯದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪರಿಕ್ಕರ್, ಈಗಾಗಲೇ ನೀರಿ ಕೊರತೆ ಎದುರಿಸುತ್ತಿರುವ ಮಹದಾಯಿ ನದಿ ನೀರನ್ನು ಕರ್ನಾಟಕ ಮಲಪ್ರಭಾ ನದಿ ತಿರುಗಿಸಲು ಸಾಧ್ಯವಿಲ್ಲ. ಮಹದಾಯಿ ನ್ಯಾಯಾಧೀಕರಣದಲ್ಲಿ ಗೋವಾ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದರು.
ಕರ್ನಾಟಕ ಮಹದಾಯಿ ನದಿಯಿಂದ ನೀರು ಪಡೆದಿಲ್ಲ ಎಂದು ಯಾರಾದರೂ ಭಾವಿಸಿದರೆ, ಅವರು ಮೂರ್ಖನ ಸ್ವರ್ಗದಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರಿಗೆ ಕಾನೂನಿನ ಅರಿವಿಲ್ಲ ಎಂದರ್ಥ ಎಂದು ಗೋವಾ ಸಿಎಂ ಹೇಳಿದ್ದಾರೆ.
ಕರ್ನಾಟಕದಲ್ಲಿ ಹರಿಯುವ ಮಹದಾಯಿ ನೀರನ್ನು ಬಳಸಿಕೊಳ್ಳದಂತೆ ತಡೆಯಲು ಹೇಗೆ ಸಾಧ್ಯ? ಆದರೆ ಅವರು ಆ ನೀರನ್ನು ಮತ್ತೊಂದು ಪ್ರದೇಶಕ್ಕೆ ಹರಿಸುವಂತಿಲ್ಲ. ಅದೇ ಪ್ರದೇಶದಲ್ಲಿ ಅವರು ಕುಡಿಯಲು ಬಳಸಲಿ ಅಥವಾ ಕೃಷಿಗೂ ಬಳಸಲಿ ಎಂದು ಪರಿಕ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT