ಮನೋಹರ್ ಪರಿಕ್ಕರ್ 
ದೇಶ

ಮಹದಾಯಿ ವಿವಾದ; ಕರ್ನಾಟಕ ತನ್ನ ಪಾಲಿನ ನೀರು ಪಡೆಯುವುದು ಅನಿವಾರ್ಯ: ಗೋವಾ ಸಿಎಂ

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ತೀವ್ರ ಟೀಕೆಗೆ....

ಪಣಜಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ತೀವ್ರ ಟೀಕೆಗೆ ಕಾರಣವಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕರ್ನಾಟಕ ತನ್ನ ಪಾಲಿನ ನೀರು ಪಡೆಯುವುದು ಅನಿವಾರ್ಯವಾಗಿದೆ ಎಂದು ಗುರುವಾರ ಹೇಳಿದ್ದಾರೆ.
ಇಂದು ಸಚಿವಾಲಯದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪರಿಕ್ಕರ್, ಈಗಾಗಲೇ ನೀರಿ ಕೊರತೆ ಎದುರಿಸುತ್ತಿರುವ ಮಹದಾಯಿ ನದಿ ನೀರನ್ನು ಕರ್ನಾಟಕ ಮಲಪ್ರಭಾ ನದಿ ತಿರುಗಿಸಲು ಸಾಧ್ಯವಿಲ್ಲ. ಮಹದಾಯಿ ನ್ಯಾಯಾಧೀಕರಣದಲ್ಲಿ ಗೋವಾ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದರು.
ಕರ್ನಾಟಕ ಮಹದಾಯಿ ನದಿಯಿಂದ ನೀರು ಪಡೆದಿಲ್ಲ ಎಂದು ಯಾರಾದರೂ ಭಾವಿಸಿದರೆ, ಅವರು ಮೂರ್ಖನ ಸ್ವರ್ಗದಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರಿಗೆ ಕಾನೂನಿನ ಅರಿವಿಲ್ಲ ಎಂದರ್ಥ ಎಂದು ಗೋವಾ ಸಿಎಂ ಹೇಳಿದ್ದಾರೆ.
ಕರ್ನಾಟಕದಲ್ಲಿ ಹರಿಯುವ ಮಹದಾಯಿ ನೀರನ್ನು ಬಳಸಿಕೊಳ್ಳದಂತೆ ತಡೆಯಲು ಹೇಗೆ ಸಾಧ್ಯ? ಆದರೆ ಅವರು ಆ ನೀರನ್ನು ಮತ್ತೊಂದು ಪ್ರದೇಶಕ್ಕೆ ಹರಿಸುವಂತಿಲ್ಲ. ಅದೇ ಪ್ರದೇಶದಲ್ಲಿ ಅವರು ಕುಡಿಯಲು ಬಳಸಲಿ ಅಥವಾ ಕೃಷಿಗೂ ಬಳಸಲಿ ಎಂದು ಪರಿಕ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT