ಶಿವಸೇನಾ ಸಂಸದ ಸಂಜಯ್ ರಾವತ್ 
ದೇಶ

ಭೀಮಾ ಕೋರೆಗಾಂವ್ ಹಿಂಸಾಚಾರದ ಹಿಂದೆ ರಾಜಕೀಯ ದುರುದ್ದೇಶ: ಶಿವಸೇನೆ

ಭೀಮ-ಕೊರೆಗಾಂವ್ ಹಿಂಸಾಚಾರವನ್ನು ವಿರೋಧಿಸಿ ಮಹಾರಾಷ್ಟ್ರದಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಮತ್ತು....

ಮುಂಬೈ: ಭೀಮ-ಕೋರೆಗಾಂವ್ ಹಿಂಸಾಚಾರವನ್ನು ವಿರೋಧಿಸಿ ಮಹಾರಾಷ್ಟ್ರದಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಮತ್ತು ಬಂದ್ ಗೆ ಪ್ರತಿಕ್ರಿಯಿಸಿರುವ ಶಿವಸೇನೆ, ರಾಜ್ಯಾದ್ಯಂತ ಇಂತಹ ತೊಂದರೆ ಸೃಷ್ಟಿಸುವ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ನಡೆಸುತ್ತಿರುವ ಪ್ರಯತ್ನವಿದು ಎಂದು ಆರೋಪಿಸಿದೆ.
ಶಿವಸೇನಾ ಸಂಸದ ಸಂಜಯ್ ರಾವತ್ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ, ಭೀಮಾ-ಕೋರೆಗಾಂವ್ ಹಿಂಸಾಚಾರಕ್ಕೆ 200 ವರ್ಷಗಳ ಇತಿಹಾಸವಿದೆ. ಆದರೆ ಇತಿಹಾಸದ ಹೆಸರಿನಲ್ಲಿ ಯಾವುದೇ ದಂಗೆ, ಗಲಭೆಗಳು ನಡೆದಿಲ್ಲ.ಆ ಯುದ್ಧ ನಡೆದ ಸಂದರ್ಭದಲ್ಲಿ ಎಲ್ಲಾ ಜಾತಿ ಮತ್ತು ಸಮುದಾಯಗಳು ಒಗ್ಗಟ್ಟಿನಿಂದ ತಮ್ಮ ಶತ್ರುಗಳ ವಿರುದ್ಧ ಹೋರಾಡಿದ್ದರು. ಆದರೆ ಇಂದು ಜಾತಿ, ಸಮುದಾಯಗಳ ಹೆಸರಿನಲ್ಲಿ ಪ್ರತಿಭಟನೆ, ಜಗಳ ಮಾಡಿ ಶೌರ್ಯ ದಿವಸವನ್ನು ಆಚರಿಸುತ್ತಿದ್ದಾರೆ. ಇದು ಖಂಡಿತಾ ತಪ್ಪು. ರಾಜಕೀಯ ಲಾಭ ಪಡೆಯಲು ಯಾರೋ ಪ್ರಯತ್ನಿಸುತ್ತಿದ್ದಾರೆ. ಅವರ ಮುಖವಾಡ ಖಂಡಿತವಾಗಿಯೂ ಬಯಲಾಗಲಿದೆ ಎಂದು ಹೇಳಿದರು.
ಪಕ್ಷಭೇದ ಮರೆತು ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ. ರಾಜಕೀಯ ನಾಯಕರನ್ನು ಜನರನ್ನು ಕೆರಳಿಸುವಂಥ ಭಾಷಣಗಳನ್ನು ಮಾಡಲು ಬಿಡಬಾರದು ಎಂದು ರಾವತ್ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT