ಮುಂಬೈನಲ್ಲಿ ಮತ್ತೆ ಅಗ್ನಿ ದುರಂತ, ನಾಲ್ವರ ಸಾವು 7 ಜನರಿಗೆ ಗಾಯ 
ದೇಶ

ಮುಂಬೈನಲ್ಲಿ ಮತ್ತೆ ಅಗ್ನಿ ದುರಂತ, ನಾಲ್ವರ ಸಾವು 7 ಜನರಿಗೆ ಗಾಯ

ಮುಂಬೈನ ಕಮಲಾ ಮಿಲ್ಸ್​​ ಅಗ್ನಿ ದುರಂತವನ್ನು ಮರೆಯುವ ಮುನ್ನವೇ ಮುಂಬೈನಲ್ಲಿ ಇನ್ನೊಂದು ಅಗ್ನಿ ಅವಘಡ ಸಂಭವಿಸಿದೆ.

ಮುಂಬೈ: ಮುಂಬೈನ ಕಮಲಾ ಮಿಲ್ಸ್​​ ಅಗ್ನಿ ದುರಂತವನ್ನು ಮರೆಯುವ ಮುನ್ನವೇ ಮುಂಬೈನಲ್ಲಿ ಇನ್ನೊಂದು ಅಗ್ನಿ ಅವಘಡ ಸಂಭವಿಸಿದೆ. 
ಮುಂಬೈನ ಅಂಧೇರಿಯಲ್ಲಿನ ಮೈಮೂನ್​ ಮಂಜಿಲ್​ ಎಂಬ ಕಟ್ಟಡದಲ್ಲಿ ಈ ದುರಂತ ಸಂಭವಿಸಿದ್ದು 4 ಜನ ಸಾವನ್ನಪ್ಪಿದ್ದು ಏಳು ಮಂದಿಗೆ ಗಾಯವಾಗಿದೆ.
ಇಂದು ಬೆಳಗಿನ ಜಾವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದಕ್ಕೆ ಕಾರಣಗಳು ಪತ್ತೆಯಾಗಿಲ್ಲ. ಘಟನೆಯಲ್ಲಿ ಮೃತಪಟ್ಟವರಲ್ಲಿ  10 ಹಾಗೂ 14 ವರ್ಷದ ಮಕ್ಕಳು ಹಾಗೂ ಓರ್ವ ಹಿರಿಯ ನಾಗರಿಕರು ಸೇರಿದ್ದಾರೆ ಎನ್ನಲಾಗಿದೆ.
ಸದ್ಯ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಕಳೆದ ವಾರವಷ್ಟೇ ಮುಂಬೈನ ಕಮಲಾ ಮಿಲ್ಸ್ ಅಗ್ನಿ ದುರಂತದಲ್ಲಿ 14 ಜನ ದಾರುಣವಾಗಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT