ಮುಂಬೈನಲ್ಲಿ ಮತ್ತೆ ಅಗ್ನಿ ದುರಂತ, ನಾಲ್ವರ ಸಾವು 7 ಜನರಿಗೆ ಗಾಯ 
ದೇಶ

ಮುಂಬೈನಲ್ಲಿ ಮತ್ತೆ ಅಗ್ನಿ ದುರಂತ, ನಾಲ್ವರ ಸಾವು 7 ಜನರಿಗೆ ಗಾಯ

ಮುಂಬೈನ ಕಮಲಾ ಮಿಲ್ಸ್​​ ಅಗ್ನಿ ದುರಂತವನ್ನು ಮರೆಯುವ ಮುನ್ನವೇ ಮುಂಬೈನಲ್ಲಿ ಇನ್ನೊಂದು ಅಗ್ನಿ ಅವಘಡ ಸಂಭವಿಸಿದೆ.

ಮುಂಬೈ: ಮುಂಬೈನ ಕಮಲಾ ಮಿಲ್ಸ್​​ ಅಗ್ನಿ ದುರಂತವನ್ನು ಮರೆಯುವ ಮುನ್ನವೇ ಮುಂಬೈನಲ್ಲಿ ಇನ್ನೊಂದು ಅಗ್ನಿ ಅವಘಡ ಸಂಭವಿಸಿದೆ. 
ಮುಂಬೈನ ಅಂಧೇರಿಯಲ್ಲಿನ ಮೈಮೂನ್​ ಮಂಜಿಲ್​ ಎಂಬ ಕಟ್ಟಡದಲ್ಲಿ ಈ ದುರಂತ ಸಂಭವಿಸಿದ್ದು 4 ಜನ ಸಾವನ್ನಪ್ಪಿದ್ದು ಏಳು ಮಂದಿಗೆ ಗಾಯವಾಗಿದೆ.
ಇಂದು ಬೆಳಗಿನ ಜಾವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದಕ್ಕೆ ಕಾರಣಗಳು ಪತ್ತೆಯಾಗಿಲ್ಲ. ಘಟನೆಯಲ್ಲಿ ಮೃತಪಟ್ಟವರಲ್ಲಿ  10 ಹಾಗೂ 14 ವರ್ಷದ ಮಕ್ಕಳು ಹಾಗೂ ಓರ್ವ ಹಿರಿಯ ನಾಗರಿಕರು ಸೇರಿದ್ದಾರೆ ಎನ್ನಲಾಗಿದೆ.
ಸದ್ಯ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಕಳೆದ ವಾರವಷ್ಟೇ ಮುಂಬೈನ ಕಮಲಾ ಮಿಲ್ಸ್ ಅಗ್ನಿ ದುರಂತದಲ್ಲಿ 14 ಜನ ದಾರುಣವಾಗಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ