ಆಂಡ್ರೇ ಗ್ಲಾಗೋಲೆವ್ 
ದೇಶ

ಜಗತ್ ಪ್ರಸಿದ್ಧ ಪುರಿ ಜಗನ್ನಾಥ್ ದೇವಸ್ತಾನದ ಬಳಿ ಭಿಕ್ಷೆ ಬೇಡುತ್ತಿದ್ದ ರಷ್ಯಾ ಪ್ರಜೆ ರಕ್ಷಣೆ; ದೆಹಲಿಗೆ ರವಾನೆ!

ಜಗತ್ ಪ್ರಸಿದ್ಧ ಪುರಿ ಜಗನ್ನಾಥ್ ದೇವಸ್ತಾನದ ಬಳಿ ಭಿಕ್ಷೆ ಬೇಡುತ್ತಿದ್ದ ರಷ್ಯಾ ಪ್ರಜೆಯನ್ನು ಪುರಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ದೆಹಲಿಯ ರಷ್ಯಾ ರಾಯಭಾರಿ ಕಚೇರಿಗೆ...

ಪುರಿ: ಜಗತ್ ಪ್ರಸಿದ್ಧ ಪುರಿ ಜಗನ್ನಾಥ್ ದೇವಸ್ತಾನದ ಬಳಿ ಭಿಕ್ಷೆ ಬೇಡುತ್ತಿದ್ದ ರಷ್ಯಾ ಪ್ರಜೆಯನ್ನು ಪುರಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ದೆಹಲಿಯ ರಷ್ಯಾ ರಾಯಭಾರಿ ಕಚೇರಿಗೆ ಕಳುಹಿಸಿದೆ. 
ರಷ್ಯಾ ಮೂಲದ 53 ವರ್ಷದ ಆಂಡ್ರೇ ಗ್ಲಾಗೋಲೆವ್ ಜಗನ್ನಾಥ ದೇವಸ್ತಾನದ ಬಳಿ ಭಿಕ್ಷೆ ಬೇಡುತ್ತಿದ್ದು ಇದನ್ನು ಗಮನಿಸಿದ ಪುರಿ ಜಿಲ್ಲಾಡಲಿತ ಡಿಸೆಂಬರ್ 11ರಂದು ಅವರನ್ನು ರಕ್ಷಿಸಿ ಅವರಿಗೆ ನಗರದಲ್ಲಿ ಪುನರ್ವಸತಿ ಕಲ್ಪಿಸಲಾಗಿತ್ತು. 
ಗ್ಲಾಗೋಲೆವ್ ರಷ್ಯಾಗೆ ಹಿಂದಿರುಗಲು ಹಿಂಜರಿದಿದ್ದು ನಿರಾಶ್ರಿತರ ಸ್ಥಾನಮಾನದೊಂದಿಗೆ ಭಾರತದಲ್ಲೇ ಉಳಿಯಲು ಬಯಸಿದ್ದಾರೆ. ನಿನ್ನೆ ಪುರುಶೋತ್ತಮ್ ಎಕ್ಸ್ ಪ್ರೆಸ್ ನಲ್ಲಿ ನವದೆಹಲಿ ತೆರಳಿದರು. 
ಮೂಲಗಳ ಪ್ರಕಾರ, ಗ್ಲಾಗೋಲೆವ್ ರಷ್ಯಾದ ಬವಿ ಪ್ರದೇಶದಿಂದ ಭಾರತಕ್ಕೆ ಆಗಮಿಸಿದ್ದರು. ಸದ್ಯ ಅವರು ನಿರಾಶ್ರಿತರ ಸ್ಥಾನಕ್ಕಾಗಿ ದೆಹಲಿಯಲ್ಲಿನ ನಿರಾಶ್ರಿತರ ವಿಶ್ವಸಂಸ್ಥೆಯ ಹೈ ಕಮಿಷನ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. 
2015ರಲ್ಲಿ ಗ್ಲಾಗೋಲೆವ್ ರಷ್ಯಾದಿಂದ ಭಾರತಕ್ಕೆ ಬಂದಿದ್ದರು. ಕಾರಣ ಭಗವಂತಾ ಶಿವನನ್ನು ಆರಾಧಿಸಲು ಪ್ರಾರಂಭಿಸಿದಾಗ ಕುಟುಂಬಸ್ಥರು ನನ್ನನ್ನು ಮನೆಯಿಂದ ಹೊರಹಾಕಿದ್ದರು ಎಂದು ಆಂಡ್ರೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT