ಮಮತಾ ಬ್ಯಾನರ್ಜಿ 
ದೇಶ

ಎನ್​ಆರ್​ಸಿ ವಿರುದ್ಧ ಹೇಳಿಕೆ: ಮಮತಾ ವಿರುದ್ಧ ಅಸ್ಸಾಂ ಪೊಲೀಸರಿಂದ ಎಫ್ಐಆರ್​ದಾಖಲು

ರಾಷ್ಟ್ರೀಯ ಪೌರ ನೋಂದಣಿ(ಎನ್ಆರ್​ಸಿ) ಟೀಕಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ....

ಗೌಹಾಟಿ: ರಾಷ್ಟ್ರೀಯ ಪೌರ ನೋಂದಣಿ(ಎನ್ಆರ್​ಸಿ) ಪ್ರಕ್ರಿಯೆ ಟೀಕಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಸ್ಸಾಂ ಪೊಲೀಸರು ಶುಕ್ರವಾರ ಎಫ್ ಐಆರ್ ದಾಖಲಿಸಿದ್ದಾರೆ.
ನಿನ್ನೆ ರ್ಯಾಲಿಯೊಂದರಲ್ಲಿ  ಅಸ್ಸಾಂನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಮಮತಾ ಬ್ಯಾನರ್ಜಿ, ಎನ್ಆರ್​ಸಿ ಪ್ರಕ್ರಿಯೆ ಕೇವಲ ಬೆಂಗಾಲಿ ಭಾಷಿಗರನ್ನು ಅಸ್ಸಾಂ ರಾಜ್ಯದಿಂದ ಹೊರದಬ್ಬಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೆ ಅಕಸ್ಮಾತ್​ ಆ ರೀತಿಯಾದಲ್ಲಿ ತಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ವಿರುದ್ಧ ಅಸ್ಸಾಂ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದು, ಅಸ್ಸಾಂ ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ತೃಣಮೂಲ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ರೀತಿ ಕೇಸ್ ದಾಖಲಿಸುವದರಿಂದ ದೀದಿಯ ಹೋರಾಟ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಸಚಿವ ಚಂದ್ರಮೋಹನ್​ ಪಟೌರಿ, ಈ ಪ್ರಕ್ರಿಯೆಯನ್ನು ಅಸ್ಸಾಂನ ಜನತೆ ಬೆಂಬಲಿಸಿದೆ. ಎಲ್ಲ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಆದರೆ, ಬ್ಯಾನರ್ಜಿ ಅವರು ಮಾತ್ರ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಲ್ಲದೆ, ನಮ್ಮ ಜನತೆಗೆ ಅವಮಾನಿಸಿದ್ದಾರೆ ಎಂದಿದ್ದಾರೆ.
ಗೌಹಾಟಿ ಮೂಲದ ವಕಿಲರೊಬ್ಬರು ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT