ಮಮತಾ ಬ್ಯಾನರ್ಜಿ 
ದೇಶ

ಎನ್​ಆರ್​ಸಿ ವಿರುದ್ಧ ಹೇಳಿಕೆ: ಮಮತಾ ವಿರುದ್ಧ ಅಸ್ಸಾಂ ಪೊಲೀಸರಿಂದ ಎಫ್ಐಆರ್​ದಾಖಲು

ರಾಷ್ಟ್ರೀಯ ಪೌರ ನೋಂದಣಿ(ಎನ್ಆರ್​ಸಿ) ಟೀಕಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ....

ಗೌಹಾಟಿ: ರಾಷ್ಟ್ರೀಯ ಪೌರ ನೋಂದಣಿ(ಎನ್ಆರ್​ಸಿ) ಪ್ರಕ್ರಿಯೆ ಟೀಕಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಸ್ಸಾಂ ಪೊಲೀಸರು ಶುಕ್ರವಾರ ಎಫ್ ಐಆರ್ ದಾಖಲಿಸಿದ್ದಾರೆ.
ನಿನ್ನೆ ರ್ಯಾಲಿಯೊಂದರಲ್ಲಿ  ಅಸ್ಸಾಂನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಮಮತಾ ಬ್ಯಾನರ್ಜಿ, ಎನ್ಆರ್​ಸಿ ಪ್ರಕ್ರಿಯೆ ಕೇವಲ ಬೆಂಗಾಲಿ ಭಾಷಿಗರನ್ನು ಅಸ್ಸಾಂ ರಾಜ್ಯದಿಂದ ಹೊರದಬ್ಬಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೆ ಅಕಸ್ಮಾತ್​ ಆ ರೀತಿಯಾದಲ್ಲಿ ತಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ವಿರುದ್ಧ ಅಸ್ಸಾಂ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದು, ಅಸ್ಸಾಂ ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ತೃಣಮೂಲ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ರೀತಿ ಕೇಸ್ ದಾಖಲಿಸುವದರಿಂದ ದೀದಿಯ ಹೋರಾಟ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಸಚಿವ ಚಂದ್ರಮೋಹನ್​ ಪಟೌರಿ, ಈ ಪ್ರಕ್ರಿಯೆಯನ್ನು ಅಸ್ಸಾಂನ ಜನತೆ ಬೆಂಬಲಿಸಿದೆ. ಎಲ್ಲ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಆದರೆ, ಬ್ಯಾನರ್ಜಿ ಅವರು ಮಾತ್ರ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಲ್ಲದೆ, ನಮ್ಮ ಜನತೆಗೆ ಅವಮಾನಿಸಿದ್ದಾರೆ ಎಂದಿದ್ದಾರೆ.
ಗೌಹಾಟಿ ಮೂಲದ ವಕಿಲರೊಬ್ಬರು ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT