ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ 
ದೇಶ

ಮೇವು ಹಗರಣ: ವಯಸ್ಸು, ಅನಾರೋಗ್ಯ ಪರಿಗಣಿಸಿ ಕನಿಷ್ಟ ಶಿಕ್ಷೆ ವಿಧಿಸಿ: ಕೋರ್ಟ್'ಗೆ ಲಾಲೂ ಮನವಿ

ವಯಸ್ಸು ಮತ್ತು ಅನಾರೋಗ್ಯವನ್ನು ಪರಿಗಣಿಸಿ ಕನಿಷ್ಟ ಶಿಕ್ಷೆಯನ್ನು ವಿಧಿಸಿ ಎಂದು ಬಿಹಾರ ರಾಜ್ಯ ಮಾಜಿ ಮುಖ್ಯಮಂತ್ರಿ ಹಾಗೂ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ನ್ಯಾಯಾಲಯ ಬಳಿ ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ...

ರಾಂಚಿ; ವಯಸ್ಸು ಮತ್ತು ಅನಾರೋಗ್ಯವನ್ನು ಪರಿಗಣಿಸಿ ಕನಿಷ್ಟ ಶಿಕ್ಷೆಯನ್ನು ವಿಧಿಸಿ ಎಂದು ಬಿಹಾರ ರಾಜ್ಯ ಮಾಜಿ ಮುಖ್ಯಮಂತ್ರಿ ಹಾಗೂ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ನ್ಯಾಯಾಲಯ ಬಳಿ ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ. 
ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಲಾಲೂ ಪ್ರಸಾದ್ ಯಾದವ್ ಅವರು, ಆರೋಗ್ಯ ಹಾಗೂ ವಯಸ್ಸನ್ನು ಪರಿಗಣಿಸಿ ಕನಿಷ್ಟ ಶಿಕ್ಷೆ ವಿಧಿಸುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 
ಹಗರಣದಲ್ಲಿ ನೇರವಾಗಿ ನನ್ನ ಪಾತ್ರವಿಲ್ಲ. ಹೀಗಾಗಿ ನನ್ನ ವಯಸ್ಸು ಹಾಗೂ ಅನಾರೋಗ್ಯವನ್ನು ಪರಿಗಣಿಸಿ ಕನಿಷ್ಟ ಶಿಕ್ಷೆ ವಿಧಿಸುವಂತೆ ಅರ್ಜಿಯಲ್ಲಿ ಲಾಲೂ ತಿಳಿಸಿದ್ದಾರೆ. 
ಈ ನಡುವೆ ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಬಿಹಾರ ಪಕ್ಷದ ಮುಖ್ಯಸ್ಥ ರಾಮಚಂದ್ರ ಪುರ್ವೆ ಅವರು, ಲಾಲೂ ಪ್ರಸಾದ್ ಯಾದವ್ ಅವರಿಗೆ ಎಲ್ಲರ ಆಶೀರ್ವಾದವಿದೆ, ನಮಗೆ ನ್ಯಾಯ ದೊರಕುತ್ತದೆ ಎಂದು ನಮಗೆ ನಂಬಿಕೆಯಿದೆ. ನಮ್ಮ ಮುಖ್ಯಸ್ಥ ಲಾಲೂ ಅವರು ನಾಳೆ ನಡೆಯಲಿರುವ ಆರ್'ಜೆಡಿ ಪಕ್ಷದ ಅತೀ ಮುಖ್ಯವಾದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT