ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ 
ದೇಶ

ಮೇವು ಹಗರಣ: ವಯಸ್ಸು, ಅನಾರೋಗ್ಯ ಪರಿಗಣಿಸಿ ಕನಿಷ್ಟ ಶಿಕ್ಷೆ ವಿಧಿಸಿ: ಕೋರ್ಟ್'ಗೆ ಲಾಲೂ ಮನವಿ

ವಯಸ್ಸು ಮತ್ತು ಅನಾರೋಗ್ಯವನ್ನು ಪರಿಗಣಿಸಿ ಕನಿಷ್ಟ ಶಿಕ್ಷೆಯನ್ನು ವಿಧಿಸಿ ಎಂದು ಬಿಹಾರ ರಾಜ್ಯ ಮಾಜಿ ಮುಖ್ಯಮಂತ್ರಿ ಹಾಗೂ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ನ್ಯಾಯಾಲಯ ಬಳಿ ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ...

ರಾಂಚಿ; ವಯಸ್ಸು ಮತ್ತು ಅನಾರೋಗ್ಯವನ್ನು ಪರಿಗಣಿಸಿ ಕನಿಷ್ಟ ಶಿಕ್ಷೆಯನ್ನು ವಿಧಿಸಿ ಎಂದು ಬಿಹಾರ ರಾಜ್ಯ ಮಾಜಿ ಮುಖ್ಯಮಂತ್ರಿ ಹಾಗೂ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ನ್ಯಾಯಾಲಯ ಬಳಿ ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ. 
ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಲಾಲೂ ಪ್ರಸಾದ್ ಯಾದವ್ ಅವರು, ಆರೋಗ್ಯ ಹಾಗೂ ವಯಸ್ಸನ್ನು ಪರಿಗಣಿಸಿ ಕನಿಷ್ಟ ಶಿಕ್ಷೆ ವಿಧಿಸುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 
ಹಗರಣದಲ್ಲಿ ನೇರವಾಗಿ ನನ್ನ ಪಾತ್ರವಿಲ್ಲ. ಹೀಗಾಗಿ ನನ್ನ ವಯಸ್ಸು ಹಾಗೂ ಅನಾರೋಗ್ಯವನ್ನು ಪರಿಗಣಿಸಿ ಕನಿಷ್ಟ ಶಿಕ್ಷೆ ವಿಧಿಸುವಂತೆ ಅರ್ಜಿಯಲ್ಲಿ ಲಾಲೂ ತಿಳಿಸಿದ್ದಾರೆ. 
ಈ ನಡುವೆ ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಬಿಹಾರ ಪಕ್ಷದ ಮುಖ್ಯಸ್ಥ ರಾಮಚಂದ್ರ ಪುರ್ವೆ ಅವರು, ಲಾಲೂ ಪ್ರಸಾದ್ ಯಾದವ್ ಅವರಿಗೆ ಎಲ್ಲರ ಆಶೀರ್ವಾದವಿದೆ, ನಮಗೆ ನ್ಯಾಯ ದೊರಕುತ್ತದೆ ಎಂದು ನಮಗೆ ನಂಬಿಕೆಯಿದೆ. ನಮ್ಮ ಮುಖ್ಯಸ್ಥ ಲಾಲೂ ಅವರು ನಾಳೆ ನಡೆಯಲಿರುವ ಆರ್'ಜೆಡಿ ಪಕ್ಷದ ಅತೀ ಮುಖ್ಯವಾದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT