ಮೋಹನ್ ಭಾಗವತ್ 
ದೇಶ

ಕೇರಳ: ಗಣರಾಜ್ಯೋತ್ಸವ ದಿನ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಿಂದ ರಾಷ್ಟ್ರ ಧ್ವಜಾರೋಹಣ

ಕಳೆದ ಬಾರಿಯ ವಿವಾದದ ಹೊರತಾಗಿ ಈ ಗಣರಾಜ್ಯ ದಿನದಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೇರಳದ ಪಾಲಕ್ಕಾಡ್ ಶಾಲೆಯೊಂದರಲ್ಲಿ ..........

ತಿರುವನಂತಪುರಂ: ಕಳೆದ ಬಾರಿಯ ವಿವಾದದ ಹೊರತಾಗಿ ಈ ಗಣರಾಜ್ಯ ದಿನದಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೇರಳದ ಪಾಲಕ್ಕಾಡ್ ಶಾಲೆಯೊಂದರಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. 
ಈ ಬಾರಿ, ಭಾಗವತ್ ವ್ಯಾಸ ವಿದ್ಯಾ ಫೀಠದಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗವಾಹಿಸುತ್ತಿದ್ದು ಈ ವೇಳೆ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಶಾಲೆಯು ಆರ್ ಎಸ್ ಎಸ್ ನ ಭಾರತೀಯ ವಿದ್ಯಾ ನಿಕೇತನದ ಆಡಳಿತಕ್ಕೆ ಒಳಪಟ್ಟಿದೆ
"ಸಂಘದ ಚಾಲಕರು ಪಾಲಕ್ಕಾಡ್ ನ ಕಳ್ಳೆಕ್ಕಡು ಎನ್ನುವಲ್ಲಿರುವ ವ್ಯಾಸ ವಿದ್ಯಾ ಪೀಠದಲ್ಲಿ ಪಂಚಾಯತ್ ಮಟ್ಟದ ಆರ್ ಎಸ್ ಎಸ್ ಕಾರ್ಯಕರ್ತರ ಮೂರು ದಿನಗಳ ಶಿಬಿರದಲ್ಲಿ ಪಾಲ್ಗೊಳ್ಳುವವರಿದ್ದಾರೆ. ಕಾರ್ಯಕ್ರಮ ಗಣರಾಜ್ಯದಿನದಂದು ಪ್ರಾರಂಬಗೊಳ್ಳುವ ಕಾರಣ ಅಂದು ಅವರಿಂದ ರಾಷ್ಟ್ರಧ್ವಜಾರೋಹಣ ನೆರವೇರಲಿದೆ. ಶಾಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸರ್ಕಾರದ ನಿರ್ಧಾರ ವಿಚಿತ್ರವಾದದ್ದು. ಸಂವಿಧಾನದ ಅನುಸಾರ , ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯ ದಿನದಂದು ರಾಷ್ಟ್ರ ಧ್ವಜವನ್ನು ಹಾರಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ವಾಸ್ತವವಾಗಿ ರಾಷ್ಟ್ರ ಧ್ವಜ ಮತ್ತು ರಾಷ್ಟ್ರ ಗೀತೆಯನ್ನು ಅಸಮಾಧಾನ ಮಾಡಿದವರ ವಿರುದ್ಧ ಸರ್ಕಾರವು ಕ್ರಮ ತೆಗೆದುಕೊಳ್ಳಬೇಕು. ನಮ್ಮಿಂದ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ. ಶಾಲೆಯ ವಿರುದ್ಧ ಕ್ರಮವು ರಾಜಕೀಯ ಪ್ರೇರಿತವಾದದ್ದು" ಆರ್ ಎಸ್ ಎಸ್ ಪ್ರಾಂತೀಯ ಕಾರ್ಯನಿರ್ಘಕರಾದ ಮಾಸ್ಟರ್ ಪಿ. ಗೋಪಾಲಕುಟ್ಟಿ ಹೇಳಿದ್ದಾರೆ. 
ರಾಷ್ಟ್ರ ಧ್ವಜಾರೋಹಣ ಮಾಡುವುದಕ್ಕೆ ಆರ್ ಎಸ್ ಎಸ್ ಗೆ ಯಾವ ಹಕ್ಕಿಲ್ಲ ಎನ್ನುವ ಎಸ್ ಡಿಪಿಐ ನಂತಹಾ ಸಂಘಟನೆಗಳ ಮೂಲಭೂತವಾದವನ್ನು ಪ್ರಚೋದಿಸುವ ಸಿಪಿಎಂನ ಕಾರ್ಯಸೂಚಿಯು ಎಲ್ಲರಿಗೂ ತಿಳಿದಿರುವುದಾಗಿದೆ ಎಂದು ಅವರು ಹೇಳಿದ್ದಾರೆ. . "ಆರ್ ಎಸ್ ಎಸ್ ಈ ಹಿಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅಂತಹ ಶಿಬಿರಗಳನ್ನು ಆಯೋಜಿಸಲು ಸರ್ಕಾರದ ಅನುಮತಿ ಅಗತ್ಯವಿಲ್ಲ, " ಎಂದು ಬಿಜೆಪಿ ಆಂತರಿಕ ಘಟಕದ ಸಂಚಾಲಕ ಟಿಜೆ ಮೋಹನ್ ದಾಸ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT