ಜಿಗ್ನೇಶ್ ಮೇವಾನಿ 
ದೇಶ

ನನ್ನ ಭಾಷಣದ ಒಂದೇ ಒಂದು ಪದವು ಪ್ರಚೋದನಾಕಾರಿಯಾಗಿಲ್ಲ: ಜಿಗ್ನೇಶ್ ಮೇವಾನಿ

ಮುಂಬೈನಲ್ಲಿ ರ್ಯಾಲಿ ನಡೆಸಲು ಅನುಮತಿ ನಿರಾಕರಿಸಿದ ಒಂದು ದಿನದ ಬಳಿಕ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕೇಂದ್ರ ಸರ್ಕಾರ ನನ್ನ ಮೇಲೆ ವ್ಯಥಾ ಆರೋಪ ಮಾಡುತ್ತಿದೆ........

ನವದೆಹಲಿ: ಮುಂಬೈನಲ್ಲಿ ರ್ಯಾಲಿ ನಡೆಸಲು ಅನುಮತಿ ನಿರಾಕರಿಸಿದ ಒಂದು ದಿನದ ಬಳಿಕ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕೇಂದ್ರ ಸರ್ಕಾರ ನನ್ನ ಮೇಲೆ ವ್ಯಥಾ ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಡಿಸೆಂಬರ್ 31 ರಂದು "ಪ್ರಚೋದನಕಾರಿ ಭಾಷಣ" ದಲ್ಲಿ "ಕೋಮು ಸೌಹಾರ್ದವನ್ನು ಕೆಡಿಸುವ ಅಂಶಗಳಿದೆ " ಎಂದು ಆರೋಪಿಸಿ ಪುಣೆ ಪೊಲೀಸರು ನನ್ನ  ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಆದರೆ ನನ್ನ ಯಾವ ಮಾತುಗಳಲ್ಲಿಯೂ ಪ್ರಚೋದನಾಕಾರಿ ಅಂಶಗಳಿರಲಿಲ್ಲ ಎಂದು ಮೇವಾನಿ ಹೇಳಿದ್ದಾರೆ.
"ಸಂಘ ಪರಿವಾರ ಮತ್ತು ಬಿಜೆಪಿ ಸದಸ್ಯರು ನನ್ನ ಹೆಸರನ್ನು ಹಾಳು ಮಾಡಲು ಮತ್ತು ಜನಪ್ರಿಯತೆಯನ್ನು ಕೆಡಿಸಲು ಬಾಲಿಶ ಪ್ರಯತ್ನವನ್ನು ಮಾಡುತ್ತಿದ್ದಾರೆ, ಅದು ಗುಜರಾತ್ ಫಲಿತಾಂಶದ ನಂತರದ ಹೆಚ್ಚಾಗಿದೆ. 2019ರ ಚುನಾವಣೆಗಳ ಬಗೆಗೆ ಅವರು ಭೀತಿಯನ್ನು ಹೊಂದಿದ್ದಾರೆ. ನನ್ನ ಮಾತಿನ ಒಂದೇ ಒಂದು ಪದವೂ ಪ್ರಚೋದನಾಕಾರಿಯಾಗಿರಲಿಲ್ಲ, ನನ್ನ ಮೇಲೆ ವ್ಯಥಾ ದಾಳಿಯಾಗುತ್ತಿದೆ." ನವದೆಹಲಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮೇವಾನಿ ಹೇಳಿದ್ದಾರೆ.
"ನಾನು ಚುನಾಯಿತ ಪ್ರತಿನಿಧಿಯಾಗಿದ್ದೇನೆ. ಬಿಜೆಪಿ ನನನ್ನು ಕಂಡು ಭಯಪಡುತ್ತಿದೆ. ನಮಗೆ ಜಾತ್ಯಾತೀತ  ಭಾರತ ಬೇಕು. ದಲಿತರಿಗೆ ಪ್ರತಿಭಟನೆಯ ಹಕ್ಕಿದೆ, " ಅವರು ಭೀಮಾ ಕೋರೆಗಾಂವ್ ಹಿಂಸಾಚಾರವನ್ನು ನಾನು ಪ್ರಚೋದಿಸಿದ್ದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ನಾನಲ್ಲಿಗೆ ತೆರಳಲೇ ಇಲ್ಲ." ಮೇವಾನಿ ಹೇಳಿದರು.
ಭೀಮಾ ಕೋರೆಗಾಂವ್ ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮೋದಿಯವರ ನಿಲುವೇನು? ದಲಿತರ ಮೇಲಿನ ದಾಳಿಗಳು ಹೀಗೆಯೇ ಮುಂದುವರಿದರೆ 2019ರ ಲೋಕಸಭೆ ಚುನಾವಣೆಗಳಲ್ಲಿ  ಬಿಜೆಪಿಗೆ ದಲಿತರೇ ತಕ್ಕ ಪಾಠ ಕಲಿಸಲಿದ್ದಾರೆ.  ಎಂದು ಮೇವಾನಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT