ಅಜಯ್ ಮಾಕೇನ್ 
ದೇಶ

ರಾಜ್ಯಸಭೆ ಚುನಾವಣೆ; ಎಎಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸಿ: ಮಾಕೇನ್ ಆಗ್ರಹ

ರಾಜ್ಯಸಭೆ ಚುನಾವಣೆಗೆ ಎಎಪಿ ಅಭ್ಯರ್ಥಿ ಎನ್ ಡಿ ಗುಪ್ತಾ ಅವರು ಸಲ್ಲಿಸರುವ ನಾಮಪತ್ರವನ್ನು ತಿರಸ್ಕರಿಸುವಂತೆ ದೆಹಲಿ ಕಾಂಗ್ರೆಸ್....

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಎಎಪಿ ಅಭ್ಯರ್ಥಿ ಎನ್ ಡಿ ಗುಪ್ತಾ ಅವರು ಸಲ್ಲಿಸರುವ ನಾಮಪತ್ರವನ್ನು ತಿರಸ್ಕರಿಸುವಂತೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜೆಯ್ ಮಾಕೇನ್ ಅವರು ಶನಿವಾರ ಚುನಾವಣಾ ಅಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಗುಪ್ತಾ ಅವರು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್ ಸದಸ್ಯರಾಗಿದ್ದು, ಲಾಭದಾಯಕ ಹುದ್ದೆ ಹೊಂದಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಮಾಕೇನ್ ಅವರು ಒತ್ತಾಯಿಸಿದ್ದಾರೆ.
1951ರ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 36ರಡಿ ಎನ್ ಗುಪ್ತಾ ಅವರ ನಾಮಪತ್ರವನ್ನು ತಿರಸ್ಕರಿಸಬಹುದಾಗಿದೆ ಎಂದು ಅಜಯ್ ಮಾಕೇನ್ ಅವರು ಹೇಳಿದ್ದಾರೆ.
ದೆಹಲಿ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಮೂರು ಸ್ಥಾನಗಳಿಗೆ ಆಮ್ ಆದ್ಮಿ ಪಕ್ಷದಿಂದ ಎನ್ ಡಿ ಗುಪ್ತಾ, ಸಂಜಯ್ ಸಿಂಗ್ ಹಾಗೂ ಸುಶಿಲ್ ಗುಪ್ತಾ ಅವರು ಜನವರಿ 4ರಂದು ನಾಮಪತ್ರ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT