ಅಜಯ್ ಮಾಕೇನ್ 
ದೇಶ

ರಾಜ್ಯಸಭೆ ಚುನಾವಣೆ; ಎಎಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸಿ: ಮಾಕೇನ್ ಆಗ್ರಹ

ರಾಜ್ಯಸಭೆ ಚುನಾವಣೆಗೆ ಎಎಪಿ ಅಭ್ಯರ್ಥಿ ಎನ್ ಡಿ ಗುಪ್ತಾ ಅವರು ಸಲ್ಲಿಸರುವ ನಾಮಪತ್ರವನ್ನು ತಿರಸ್ಕರಿಸುವಂತೆ ದೆಹಲಿ ಕಾಂಗ್ರೆಸ್....

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಎಎಪಿ ಅಭ್ಯರ್ಥಿ ಎನ್ ಡಿ ಗುಪ್ತಾ ಅವರು ಸಲ್ಲಿಸರುವ ನಾಮಪತ್ರವನ್ನು ತಿರಸ್ಕರಿಸುವಂತೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜೆಯ್ ಮಾಕೇನ್ ಅವರು ಶನಿವಾರ ಚುನಾವಣಾ ಅಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಗುಪ್ತಾ ಅವರು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್ ಸದಸ್ಯರಾಗಿದ್ದು, ಲಾಭದಾಯಕ ಹುದ್ದೆ ಹೊಂದಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಮಾಕೇನ್ ಅವರು ಒತ್ತಾಯಿಸಿದ್ದಾರೆ.
1951ರ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 36ರಡಿ ಎನ್ ಗುಪ್ತಾ ಅವರ ನಾಮಪತ್ರವನ್ನು ತಿರಸ್ಕರಿಸಬಹುದಾಗಿದೆ ಎಂದು ಅಜಯ್ ಮಾಕೇನ್ ಅವರು ಹೇಳಿದ್ದಾರೆ.
ದೆಹಲಿ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಮೂರು ಸ್ಥಾನಗಳಿಗೆ ಆಮ್ ಆದ್ಮಿ ಪಕ್ಷದಿಂದ ಎನ್ ಡಿ ಗುಪ್ತಾ, ಸಂಜಯ್ ಸಿಂಗ್ ಹಾಗೂ ಸುಶಿಲ್ ಗುಪ್ತಾ ಅವರು ಜನವರಿ 4ರಂದು ನಾಮಪತ್ರ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT