ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟೀಸ್: ಲೋಕಸಭಾ ಸ್ಪೀಕರ್ ಗೆ ಕಳಿಸಿದ ವೆಂಕಯ್ಯ ನಾಯ್ಡು

ರಾಜ್ಯಸಭೆ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ನೋಟೀಸ್ ಕುರಿತ ಮಾಹಿತಿಯನ್ನು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಗೆ ತಿಳಿಸಿದ್ದಾರೆ.

ನವದೆಹಲಿ: ರಾಜ್ಯಸಭೆ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ನೋಟೀಸ್ ಕುರಿತ ಮಾಹಿತಿಯನ್ನು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಗೆ ತಿಳಿಸಿದ್ದಾರೆ. ರಾಹುಲ್ ಗಾಂಧಿ ಲೋಕಸಭೆಯ ಸದಸ್ಯರಾಗಿರುವ ಕಾರಣ ಅವರ ವಿರುದ್ಧದ ನೋಟೀಸ್ ವಿಚಾರವನ್ನು ಲೋಕಸಭಾಧ್ಯಕ್ಷರು ಪರಿಶೀಲಿಸಬೇಕೆಂದು ನಾಯ್ಡು ಹೇಳಿದ್ದಾರೆ.
ರಾಹುಲ್ ಗಾಂಧಿ, ಕೇಂದ್ರ ಹಣಕಾಸು ಸಚಿವರ ಹೆಸರನ್ನು ತಪ್ಪಾಗಿ ಟ್ವೀಟ್ ಮಾಡಿದ ಕಾರಣ ಬಿಜೆಪಿ ಮುಖಂಡ ಭೂಪೇಂದ್ರ ಯಾದವ್ ರಾಹುಲ್ ಅವರಿಗೆ ಕಳೆದ ವಾರ ನೋಟೀಸ್ ಜಾರಿ ಮಾಡಿದ್ದರು. 
" ಣಾನು ಇದನ್ನು ಪರಿಶೀಲಿಸಬೇಕೆಂದು, ತಮ್ಮ ದೃಷ್ಟಿಕೋನ ತಿಳಿಸಬೇಕೆಂದು ತಿಳಿಸಿ ಲೋಕಸಭಾಧ್ಯಕ್ಷರಿಗೆ ತಿಳಿಸಿದ್ದೇನೆ." ವೆಂಕಯ್ಯ ನಾಯ್ಡು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ  ಮೋದಿ ಸರ್ಕಾರವನ್ನು ಟೀಕಿಸಿ ಬರೆದ ಟ್ವೀಟ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನು Jaitley ಬದಲಿಗೆ Mr Jaitlie ಎಂದು ತಪ್ಪಾಗಿ ಬರೆದಿದ್ದರು. ರಾಹುಲ್ ಉದ್ದೇಶಪೂರ್ವಕ ಜೇಟ್ಲಿ ಹೆಸರನ್ನು ತಪ್ಪಾಗಿ ಬರೆದಿದ್ದಾರೆ ಎಂದು ಆರೋಪಿಸಿದ್ದ ಭೂಪೇಂದ್ರ ಯಾದವ್ ರಾಜ್ಯಸಭೆಯಲ್ಲಿ ಅವರ ವಿರುದ್ಧ ನೋತೀಸ್ ಜಾರಿಗೊಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT