ಸಂಗ್ರಹ ಚಿತ್ರ 
ದೇಶ

ಆಧಾರ್ ಮಾಹಿತಿ ಸೋರಿಕೆ; ಎಫ್ ಐಆರ್ ನನ್ನ 'ಬಹುದೊಡ್ಡ ಗಳಿಕೆ' ಎಂದ ಪತ್ರಕರ್ತೆ!

ನೂರು ಕೋಟಿಗೂ ಅಧಿಕ ಮಂದಿಯ ಆಧಾರ್ ಮಾಹಿತಿ ಸೋರಿಕೆ ಬಗ್ಗೆ ವರದಿ ಮಾಡಿದ ’ದಿ ಟ್ರಿಬ್ಯೂನ್’ ಪತ್ರಕರ್ತೆ ರಚನಾ ಖೈರಾ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪತ್ರಕರ್ತೆ ಇದು ನನ್ನ ಬಹುದೊಡ್ಡ ಗಳಿಕೆ ಎಂದು ಹೇಳಿದ್ದಾರೆ.

ನವದೆಹಲಿ: ನೂರು ಕೋಟಿಗೂ ಅಧಿಕ ಮಂದಿಯ ಆಧಾರ್ ಮಾಹಿತಿ ಸೋರಿಕೆ ಬಗ್ಗೆ ವರದಿ ಮಾಡಿದ ’ದ ಟ್ರಿಬ್ಯೂನ್’ ಪತ್ರಕರ್ತೆ ರಚನಾ ಖೈರಾ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ವಿಚಾರಕ್ಕೆ  ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪತ್ರಕರ್ತೆ ಇದು ನನ್ನ ಬಹುದೊಡ್ಡ ಗಳಿಕೆ ಎಂದು ಹೇಳಿದ್ದಾರೆ.
ಎಫ್ ಐಆರ್ ವಿಚಾರದ ಕುರಿತು ಮಾತನಾಡಿರುವ ಅವರು, ಇದುವರೆಗೆ ಎಫ್‌ಐಆರ್ ಪ್ರತಿ ನನ್ನ ಕೈಸೇರಿಲ್ಲ. ಆದ್ದರಿಂದ ತಕ್ಷಣಕ್ಕೆ ಇದರ ವಿವರಗಳನ್ನು ನೀಡುವುದು ಕಷ್ಟಸಾಧ್ಯ. ಆದರೆ ಆಧಾರ್ ಮಾಹಿತಿ ಸೋರಿಕೆ  ಸಂಬಂಧಿಸಿದಂತೆ ನಾನು ಮಾಡಿದ್ದ ವರದಿಯನ್ನು ನೋಡಿಯಾದರೂ ಯುಐಎಡಿಎ ಕ್ರಮಕ್ಕೆ ಮುಂದಾಗಿದೆ ಎಂಬುದೇ ಸಂತಸದ ವಿಷಯ.ನನ್ನ ವರದಿಯ ಮೇಲೆ ಯುಐಡಿಎಐ ಕ್ರಮ ಕೈಗೊಂಡ ಬಗ್ಗೆ ನನಗೆ ಸಂತಸವಿದೆ. ಎಫ್‌  ಐಆರ್ ಜತೆಗೆ ಎಲ್ಲೆಲ್ಲಿ ಉಲ್ಲಂಘನೆಯಾಗಿದೆ ಎಂಬ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು" ಎಂದು ಅವರು ಹೇಳಿದ್ದಾರೆ.
ಅಂತೆಯೇ "ನಿಮ್ಮ ವರದಿಯನ್ನು ನೀವು ಸಮರ್ಥಿಸಿಕೊಳ್ಳುತ್ತೀರಾ" ಎಂಬ ಪ್ರಶ್ನೆಗೆ, ಖಂಡಿತಾ ಹೌದು ಎಂದು ಹೇಳಿರುವ ರಚನಾ,  "ಖಂಡಿತವಾಗಿಯೂ ಅದರ ಪ್ರತಿ ಶಬ್ದಗಳನ್ನು ನಾನು ಸಮರ್ಥಿಸಿ ಕೊಳ್ಳುತ್ತೇನೆ. ಪ್ರಸ್ತುತ ನನ್ನ ಕೈಗೆ  ಎಫ್ ಆರ್ ಪ್ರತಿ ಲಭಿಸಿಲ್ಲ. ಅದರಲ್ಲಿ ಯಾವ ಅಂಶಗಳನ್ನು ಉಲ್ಲೇಖಿಸಿದ್ದಾರೆ ಎಂಬ ವಿಚಾರ ತಿಳಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಇನ್ನು ಈ ಪ್ರಕರಣದಲ್ಲಿ ಚಂಡೀಗಢ ಮಾಧ್ಯಮ ವಲಯ ಮಾತ್ರವಲ್ಲದೇ ರಾಷ್ಟ್ರೀಯ  ಹಾಗೂ ಅಂತಾರಾಷ್ಟ್ರೀಯ ಮಾಧ್ಯಮಗಳು ಬೆಂಬಲಕ್ಕೆ ನಿಂತಿವೆ. ಈ ವರದಿಯನ್ನು ಮಾಧ್ಯಮ ಕ್ಷೇತ್ರದ ದಿಗ್ಗಜರು ಹೊಗಳಿದ್ದಾರೆ. ಅಂತೆಯೇ ನನ್ನ ಪತ್ರಿಕಾ ಸಂಸ್ಥೆ ಕೂಡ ನನಗೆ ಅಗತ್ಯವಾದ ಎಲ್ಲ ಕಾನೂನು ನೆರವು ನೀಡುವ  ಭರವಸೆ ನೀಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಂತೆಯೇ ಸರ್ಕಾರ ಈ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದು, ಪ್ರಕರಣದ ವಿಚಾರದಲ್ಲಿ ಶೀಘ್ರವೇ ಸರ್ಕಾರದ ಪ್ರತಿಕ್ರಿಯೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಒಟ್ಟಾರೆ ಆಧಾರ್ ಮಾಹಿತಿ ಸೋರಿಕೆ ಪ್ರಕರಣ ಇದೀಗ ದೇಶದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT