ಓಮರ್ ಅಬ್ದುಲ್ಲಾ 
ದೇಶ

ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ: ಓಮರ್ ಅಬ್ದುಲ್ಲಾ

ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬುದಕ್ಕೆ ರಾಜ್ಯಪಾಲರು ಸರ್ಕಾರದ ವಿರುದ್ಧ ಮಾಡುತ್ತಿರುವ ಟೀಕೆಯೇ ಉದಾಹರಣೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು: ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬುದಕ್ಕೆ ರಾಜ್ಯಪಾಲರು ಸರ್ಕಾರದ ವಿರುದ್ಧ ಮಾಡುತ್ತಿರುವ ಟೀಕೆಯೇ ಉದಾಹರಣೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದಾರೆ. 
ರಾಜ್ಯಪಾಲರು ಜಮ್ಮು-ಕಾಶ್ಮೀರದಲ್ಲಿರುವ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವುದು ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ ಎಂಬುದನ್ನು ತಿಳಿಸುತ್ತದೆ ಎಂದು ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ. ಜಮ್ಮು-ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ರಾಜ್ಯಪಾಲ ಎನ್ಎನ್ ವೋಹ್ರಾ ರಾಜ್ಯ ಸರ್ಕಾರ ಮತ್ತಷ್ಟು ಸುಧಾರಣೆ ಕಾಣಬೇಕಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಓಮರ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ. 
ಪಿಡಿಪಿ-ಬಿಜೆಪಿ ಸರ್ಕಾರ ಬಂದ ನಂತರ ರಾಜ್ಯದ ಸ್ಥಿತಿ ಹದಗೆಟ್ಟಿದೆ ಎಂದು ಓಮರ್ ಅಬ್ದುಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT