ದೇಶ

ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ 'ಕೆಲ ತಪ್ಪು ವರದಿಗಳನ್ನು' ಸಹಿಸಿಕೊಳ್ಳಬೇಕು: ಸುಪ್ರೀಂ ಕೋರ್ಟ್

ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮ ಮಾಧ್ಯಮದ ಅಭಿಪ್ರಾಯಕ್ಕೆ ಅವಕಾಶ ನೀಡಬೇಕು. ಕೆಲ ತಪ್ಪು ವರದಿಗಾಗಿ...

ನವದೆಹಲಿ: ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮದ ಅಭಿಪ್ರಾಯಕ್ಕೆ ಅವಕಾಶ ನೀಡಬೇಕು. ಕೆಲ ತಪ್ಪು ವರದಿಗಾಗಿ ಮಾನಹಾನಿ ಪ್ರಕರಣ ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.
ಪತ್ರಕರ್ತರೊಬ್ಬರ ಮತ್ತು ಮಾಧ್ಯಮ ಸಂಸ್ಥೆಯ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಿದ್ದ ಪಾಟ್ನಾ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಪ್ರಜಾಪ್ರಭುತ್ವದಲ್ಲಿ ನೀವು(ಅರ್ಜಿದಾರರು) ಸಹಿಸಿಕೊಳ್ಳುವುದಲ್ಲಿ ಕಲಿಯಬೇಕು. ಒಂದು ಹಗರಣದ ಬಗ್ಗೆ ವರದಿ ಮಾಡಬೇಕಾದರೆ ಕೆಲ ತಪ್ಪುಗಳು ನಡೆಯುತ್ತವೆ. ಆದರೂ ನಾವು ಮಾಧ್ಯಮಕ್ಕೆ ಸಂಪೂರ್ಣ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಬೇಕು ಎಂದಿದ್ದಾರೆ.
ಕೆಲ ತಪ್ಪು ವರದಿಗಾಗಿ ಮಾನಹಾನಿ ಪ್ರಕರಣ ದಾಖಲಿಸುವುದು ಸರಿಯಲ್ಲ. ಮಾನಹಾನಿ ಪ್ರಕರಣ ದಾಖಲಿಸಲು ಸಂವಿಧಾನದಲ್ಲಿ ಅವಕಾಶ ಇದೆ. ಆದರೆ ಹಗರಣಗಳ ಕುರಿತ ತಪ್ಪು ವರದಿ ಮಾನಹಾನಿ ಪ್ರಕರಣವಾಗುವುದಿಲ್ಲ ಎಂದು ಹೇಳಿ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪತ್ರಕರ್ತರೊಬ್ಬರು ತಪ್ಪು ಮಾಹಿತಿ ಪ್ರಸಾರ ಮಾಡಿದ್ದು, ಇದರಿಂದ ತನ್ನ ಹಾಗೂ ಕುಟುಂಬದ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಖಾಸಗಿ ಮಾನಹಾನಿ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT