ಪುತ್ರಿ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ಸರ್ಕಾರದ ಲಾಂಛನ ಹಾಕಿದ ಬಿಜೆಪಿ ಶಾಸಕ 
ದೇಶ

ಬಿಜೆಪಿ ಶಾಸಕನಿಂದ ಪುತ್ರಿ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ಸರ್ಕಾರದ ಲಾಂಛನ ಬಳಕೆ

ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ರಾಜ್ಯದ ಬಿಜೆಪಿ ಶಾಸಕರೊಬ್ಬರು ಸರ್ಕಾರದ ಲಾಂಛನವನ್ನು ಬಳಕೆ ಮಾಡಿದ್ದು, ಇದೀಗ ಹಲವು ಟೀಕೆಗಳಿಗೆ ದಾರಿ ಮಾಡಿಕೊಟ್ಟಿದೆ...

ಹರಿದ್ವಾರ: ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ರಾಜ್ಯದ ಬಿಜೆಪಿ ಶಾಸಕರೊಬ್ಬರು ಸರ್ಕಾರದ ಲಾಂಛನವನ್ನು ಬಳಕೆ ಮಾಡಿದ್ದು, ಇದೀಗ ಹಲವು ಟೀಕೆಗಳಿಗೆ ದಾರಿ ಮಾಡಿಕೊಟ್ಟಿದೆ. 
ಪುತ್ರಿಯ ವಿವಾಹ ಹಿನ್ನಲೆ ಬಿಜೆಪಿ ಶಾಸಕ ಸುರೇಶ್ ರಾಥೋಡ್ ಅವರು ವಿವಾಹ ಆಮಂತ್ರಣ ಪತ್ರಿಕೆಯ ಮುಂಭಾಗದಲ್ಲಿ ಸರ್ಕಾರದ ಲಾಂಛನವನ್ನು ಬಳಕೆ ಮಾಡಿದ್ದಾರೆ. 
ಸರ್ಕಾರದ ಲಾಂಛನ ಬಳಕೆಯನ್ನು ಸಮರ್ಥಿಸಿಕೊಂಡಿರುವ ರಾಥೋಡ್ ಅವರು, ನಾನೂ ಕೂಡ ಸರ್ಕಾರದ ಭಾಗವಾಗಿದ್ದು, ಸರ್ಕಾರದ ಲಾಂಛನ ಬಳಕೆ ಮಾಡಿಕೊಳ್ಳುವ ಮೂಲಕ ನಾನೇನು ಅಪರಾಧ ಮಾಡಿಲ್ಲ ಎಂದು ಹೇಳಿದ್ದಾರೆ. 
ಕಡುಬಡತನದಲ್ಲಿರುವ ಯುವತಿಯೊಬ್ಬಳ ವಿವಾಹವನ್ನು ನಾನು ನನ್ನ ಸ್ವಂತ ಮಗಳ ಮದುವೆಯಂತೆ ಮಾಡುತ್ತಿದ್ದೇನೆ. ಅದನ್ನೇಕೆ ನೋಡುತ್ತಿಲ್ಲ? ನಾನು ಸರ್ಕಾರದ ಒಂದು ಭಾಗವಾಗಿದ್ದೇನೆ. ಹೀಗಾಗಿ ಮದುವೆ ಆಮಂತ್ರಣ ಪತ್ರಿಕೆ ಮೇಲೆ ಸರ್ಕಾರದ ಲಾಂಛನವನ್ನು ಬಳಸಿಕೊಂಡಿದ್ದೇನೆ. ನಾನೇನು ಅಪರಾಧ ಮಾಡಿಲ್ಲ. ಇದೀ ರೀತಿ ಸಾಕಷ್ಟು ಜನರು ಮಾಡಿರುವುದನ್ನು ನಾನು ನೋಡಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್