ಪುತ್ರಿ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ಸರ್ಕಾರದ ಲಾಂಛನ ಹಾಕಿದ ಬಿಜೆಪಿ ಶಾಸಕ 
ದೇಶ

ಬಿಜೆಪಿ ಶಾಸಕನಿಂದ ಪುತ್ರಿ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ಸರ್ಕಾರದ ಲಾಂಛನ ಬಳಕೆ

ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ರಾಜ್ಯದ ಬಿಜೆಪಿ ಶಾಸಕರೊಬ್ಬರು ಸರ್ಕಾರದ ಲಾಂಛನವನ್ನು ಬಳಕೆ ಮಾಡಿದ್ದು, ಇದೀಗ ಹಲವು ಟೀಕೆಗಳಿಗೆ ದಾರಿ ಮಾಡಿಕೊಟ್ಟಿದೆ...

ಹರಿದ್ವಾರ: ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉತ್ತರಾಖಂಡ್ ರಾಜ್ಯದ ಬಿಜೆಪಿ ಶಾಸಕರೊಬ್ಬರು ಸರ್ಕಾರದ ಲಾಂಛನವನ್ನು ಬಳಕೆ ಮಾಡಿದ್ದು, ಇದೀಗ ಹಲವು ಟೀಕೆಗಳಿಗೆ ದಾರಿ ಮಾಡಿಕೊಟ್ಟಿದೆ. 
ಪುತ್ರಿಯ ವಿವಾಹ ಹಿನ್ನಲೆ ಬಿಜೆಪಿ ಶಾಸಕ ಸುರೇಶ್ ರಾಥೋಡ್ ಅವರು ವಿವಾಹ ಆಮಂತ್ರಣ ಪತ್ರಿಕೆಯ ಮುಂಭಾಗದಲ್ಲಿ ಸರ್ಕಾರದ ಲಾಂಛನವನ್ನು ಬಳಕೆ ಮಾಡಿದ್ದಾರೆ. 
ಸರ್ಕಾರದ ಲಾಂಛನ ಬಳಕೆಯನ್ನು ಸಮರ್ಥಿಸಿಕೊಂಡಿರುವ ರಾಥೋಡ್ ಅವರು, ನಾನೂ ಕೂಡ ಸರ್ಕಾರದ ಭಾಗವಾಗಿದ್ದು, ಸರ್ಕಾರದ ಲಾಂಛನ ಬಳಕೆ ಮಾಡಿಕೊಳ್ಳುವ ಮೂಲಕ ನಾನೇನು ಅಪರಾಧ ಮಾಡಿಲ್ಲ ಎಂದು ಹೇಳಿದ್ದಾರೆ. 
ಕಡುಬಡತನದಲ್ಲಿರುವ ಯುವತಿಯೊಬ್ಬಳ ವಿವಾಹವನ್ನು ನಾನು ನನ್ನ ಸ್ವಂತ ಮಗಳ ಮದುವೆಯಂತೆ ಮಾಡುತ್ತಿದ್ದೇನೆ. ಅದನ್ನೇಕೆ ನೋಡುತ್ತಿಲ್ಲ? ನಾನು ಸರ್ಕಾರದ ಒಂದು ಭಾಗವಾಗಿದ್ದೇನೆ. ಹೀಗಾಗಿ ಮದುವೆ ಆಮಂತ್ರಣ ಪತ್ರಿಕೆ ಮೇಲೆ ಸರ್ಕಾರದ ಲಾಂಛನವನ್ನು ಬಳಸಿಕೊಂಡಿದ್ದೇನೆ. ನಾನೇನು ಅಪರಾಧ ಮಾಡಿಲ್ಲ. ಇದೀ ರೀತಿ ಸಾಕಷ್ಟು ಜನರು ಮಾಡಿರುವುದನ್ನು ನಾನು ನೋಡಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT