ಸಾಂದರ್ಭಿಕ ಚಿತ್ರ 
ದೇಶ

ತ್ರಿವಳಿ ತಲಾಖ್ ವಿವಾದ: ಸುಪ್ರೀಂ ಕೋರ್ಟ್'ಗೆ ಕಾನೂನು ರಚಿಸುವ ಹಕ್ಕುಇಲ್ಲ- ಎಐಎಂಪಿಎಲ್'ಬಿ

ತ್ರಿವಳಿ ತಲಾಖ್ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅಖಿಲ ಭಾರತ ಮೌಲ್ವಿ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್'ಬಿ), ಕಾನೂನು ರಚಿಸುವ ಹಕ್ಕು ಸುಪ್ರೀಂಕೋರ್ಟ್'ಗೆ ಇಲ್ಲ ಎಂದು ಮಂಗಳವಾರ ಹೇಳಿದೆ...

ಔರಂಗಾಬಾದ್: ತ್ರಿವಳಿ ತಲಾಖ್ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅಖಿಲ ಭಾರತ ಮೌಲ್ವಿ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್'ಬಿ), ಕಾನೂನು ರಚಿಸುವ ಹಕ್ಕು ಸುಪ್ರೀಂಕೋರ್ಟ್'ಗೆ ಇಲ್ಲ ಎಂದು ಮಂಗಳವಾರ ಹೇಳಿದೆ. 
ತ್ರಿವಳಿ ತಲಾಖ್ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಎಐಎಂಪಿಎಲ್'ಬಿ ಸದಸ್ಯ ಮೌಲಾನಾ ಅಟಾ ಉರ್ ರೆಹ್ಮನ್ ರಶಿದಿ ಅವರು, ಕಾನೂನು ಚೌಕಟ್ಟಿನೊಳಗೆ ಆದೇಶಗಳನ್ನು ನೀಡುವುದು ಸುಪ್ರೀಂಕೋರ್ಟ್ ಕೆಲಸವೇ ಹೊರತು, ಕಾನೂನು ರಚನೆ ಮಾಡುವುದಲ್ಲ ಎಂದು ಹೇಳಿದ್ದಾರೆ. 
ತ್ರಿವಳಿ ತಲಾಖ್ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ನಮ್ಮ ಹಕ್ಕುಗಳಿಗೆ ವಿರುದ್ಧವಾಗಿದೆ. ಇದನ್ನು ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಶರಿಯಾ ಕಾನೂನುಗಳ ಮಧ್ಯೆ ಸುಪ್ರೀಂಕೋರ್ಟ್ ಹಾಗೂ ಸರ್ಕಾರ ತಲೆಹಾಕುವುದು ತಪ್ಪು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT