ಮೃತನ ಜತೆ ರಾಧಾ ಕೃಷ್ಣನ್ 
ದೇಶ

ಬಸ್ಸಿನಲ್ಲಿ ಮೃತಪಟ್ಟ ಪ್ರಯಾಣಿಕನ ಶವ ರಾಷ್ಟ್ರೀಯ ಹೆದ್ದಾರಿ ಬದಿಗಿಟ್ಟು ಹೋದ ಕಂಡಕ್ಟರ್!

ರಾಜ್ಯ ರಸ್ತೆ ಸಾರಿಗೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ಮೃತಪಟ್ಟಾಗ ಆತನ ಸ್ನೇಹಿತನ ಜತೆಗೆ ಶವವನ್ನು ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಇಳಿಸಿ ಬಸ್ ಕಂಡಕ್ಟರ್...

ಕೃಷ್ಣಗಿರಿ(ತಮಿಳುನಾಡು): ರಾಜ್ಯ ರಸ್ತೆ ಸಾರಿಗೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ಮೃತಪಟ್ಟಾಗ ಆತನ ಸ್ನೇಹಿತನ ಜತೆಗೆ ಶವವನ್ನು ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಇಳಿಸಿ ಬಸ್ ಕಂಡಕ್ಟರ್ ತೆರಳಿರುವ ಅತ್ಯಂತ ಆಘಾತಕಾರಿ ಘಟನೆ ವರದಿಯಾಗಿದೆ. 
43 ವರ್ಷದ ರಾಧಾ ಕೃಷ್ಣನ್ ಮತ್ತು ಅವರ ಸ್ನೇಹಿತ 54 ವರ್ಷದ ವೀರನ್ ಎಂಬುವರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಮಾರ್ಗ ಮಧ್ಯೆ ವೀರನ್ ಎಂಬುವರು ಮೃತಪಟ್ಟಿದ್ದಾರೆ. ಆಗ ಬಸ್ ಕಂಡಕ್ಟರ್ ರಾಧಾ ಕೃಷ್ಣನ್ ಮತ್ತು ವೀರನ್ ಅವರ ಮೃತದೇಹವನ್ನು ಬಸ್ಸಿನಿಂದ ಕೆಳಗಿಳಿಸಿ ತೆರಳಿದ್ದಾರೆ. 
ರಾಷ್ಟ್ರೀಯ ಹೆದ್ದಾರಿಯಲ್ಲಿ ಶವದ ಪಕ್ಕದಲ್ಲಿ ರಾಧಾ ಕೃಷ್ಣನ್ ಕುಳಿತಿದ್ದು ಇದನ್ನು ಕಂಡು ಮಾಧ್ಯಮದವರು ಪ್ರಶ್ನಿಸಿದಾಗ ಈ ದಾರುಣ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕರಾಗಿರುವ ಇವರು ತಮಿಳುನಾಡಿನ ತಿರುವಣ್ಣಮಲೈಗೆ ರಾಜ್ಯ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸಿದ್ದರು. 
ಬೆಂಗಳೂರಿನಿಂದ ತಿರುವಣ್ಣಮಲೈಗೆ ನಾವು ತಲಾ 150 ರುಪಾಯಿ ಕೊಟ್ಟು ಬಸ್ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದೆವು. ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಬಸ್ ನಿಂದ ನಮ್ಮನ್ನು ಕೆಳಗಿಳಿಸುವಾಗ ನಮ್ಮ ಹಣವನ್ನು ವಾಪಸ್ ಕೊಡುವಂತೆ ನಾನು ಕಂಡಕ್ಟರ್ ನಲ್ಲಿ ಗೋಗರೆದೆ. ಅದಕ್ಕೆ ಆತ ನಿರಾಕರಿಸಿದ. ಆದ್ದರಿಂದ ನಾನು ಇಲ್ಲಿ ಕುಳಿತು ಯಾವುದಾದರೂ ಆ್ಯಂಬುಲೆನ್ಸ್ ಬರುತ್ತದೆಯೇ ಎಂದು ಕಾದು ನೋಡುತ್ತಿದ್ದೇನೆ ಎಂದು ಮಾಧ್ಯಮದವರ ಮುಂದೆ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT