ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಮೂಲಭೂತವಾದ ಪ್ರಸರಣೆ ವ್ಯಾಪಕ, ಮಸೀದಿಗಳ ಮೇಲೆ 'ಕೇಂದ್ರ'ದ ನಿಯಂತ್ರಣಬೇಕು: ಬಿಪಿನ್ ರಾವತ್

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣ, ಸರ್ಕಾರಿಶಾಲೆ, ಮದರಸಾಗಳ ಮೂಲಕ ಯುವಕರಲ್ಲಿ ಮೂಲಭೂತವಾದ ಪ್ರಸರಣ ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರ ಮದರಸಾಗಳ ಮೇಲೆ ನಿಯಂತ್ರಣ ಸಾಧಿಸಬೇಕು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣ, ಸರ್ಕಾರಿಶಾಲೆ, ಮದರಸಾಗಳ ಮೂಲಕ ಯುವಕರಲ್ಲಿ ಮೂಲಭೂತವಾದ ಪ್ರಸರಣ ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರ ಮದರಸಾಗಳ ಮೇಲೆ  ನಿಯಂತ್ರಣ ಸಾಧಿಸಬೇಕು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಶುಕ್ರವಾರ ಸೇನಾ ದಿನಾಚರಣೆ ನಿಮಿತ್ತ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿನ ಶಿಕ್ಷಣ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆಯೇ ಆಗಬೇಕು ಎಂದು ಹೇಳಿದರು. ಶೈಕ್ಷಣಿಕ ವ್ಯವಸ್ಥೆಯ  ಬದಲಾವಣೆಯಿಂದ ಮಾತ್ರ ಕಾಶ್ಮೀರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸಾಧ್ಯ. ಕಾಶ್ಮೀರದಲ್ಲಿರುವ ಮೂಲಭೂತವಾದವನ್ನು ಬುಡಸಹಿತ ಕಿತ್ತೊಗೆಯಬೇಕಾದರೆ ಮೊದಲು ಅಲ್ಲಿನ ಶಿಕ್ಷಣ ವ್ಯವಸ್ಥೆ ಬದಲಾಗಬೇಕು. ಕಾಶ್ಮೀರದಲ್ಲಿ  ಸಾಮಾಜಿಕ ಜಾಲತಾಣ, ಸರ್ಕಾರಿ ಶಾಲೆ, ಮದರಸಾ ಮತ್ತು ಮಸೀದಿಗಳ ದುರ್ಬಳಕೆಯಾಗುತ್ತಿದ್ದು, ಶಿಕ್ಷಣದ ಬದಲಿಗೆ ಮೂಲಭೂತವಾದವನ್ನು ವಿದ್ಯಾರ್ಥಿಗಳಿಗೆ ತುಂಬಲಾಗುತ್ತಿದೆ. ಹೀಗಾಗಿ ಮದರಸಾ ಮತ್ತು ಮಸೀದಿಗಳನ್ನು  ಕೇಂದ್ರ ಸರ್ಕಾರ ನಿಯಂತ್ರಿಸಲೇಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರಿ ಶಾಲೆಗಳಲ್ಲಿಯೇ ಕಾಶ್ಮೀರ ರಾಜ್ಯವನ್ನು ಭಾರತದಿಂದ ಬೇರ್ಪಡಿಸಿ ಪಾಠ ಮಾಡಲಾಗುತ್ತಿದೆ. ನೀವು ಯಾವುದೇ ಸರ್ಕಾರಿ ಶಾಲೆಗಳಿಗೆ ತೆರಳಿ ಪರಿಶೀಲಿಸಿ, ಅಲ್ಲಿ ಎರಡೆರಡು ಮ್ಯಾಪ್ ಗಳು ದೊರೆಯುತ್ತವೆ..ಒಂದು ಪ್ರತ್ಯೇಕ  ಜಮ್ಮು ಮತ್ತು ಕಾಶ್ಮೀರದ್ದು..ಮತ್ತೊಂದು ಭಾರತ ದೇಶದ್ದು..ಈ ಮೂಲಕ ಮಕ್ಕಳಿಗೆ ಆ ಶಾಲೆಗಳು ಏನನ್ನು ಸಾರಲು ಮುಂದಾಗುತ್ತಿವೆ..? ಸರ್ಕಾರಿ ಶಾಲೆಗಳಲ್ಲಿ ಪುಟ್ಟ ಪುಟ್ಟ ಮಕ್ಕಳಲ್ಲಿಯೇ ಪ್ರತ್ಯೇಕತಾವಾದನ್ನು ತುಂಬಲಾಗುತ್ತಿದೆ.  ಮುಖ್ಯವಾಗಿ ನಮಗೆ ಹಿನ್ನಡೆಯಾಗುತ್ತಿರುವುದು ಸಾಮಾಜಿಕ ಜಾಲತಾಣಗಳಿಂದ. ಸುಳ್ಳು ಮಾಹಿತಿಗಳು ಮತ್ತು ಪ್ರಚೋದನಕಾರಿ ಮಾಹಿತಿಗಳು ಕ್ಷಣ ಮಾತ್ರದಲ್ಲಿ ಕಾಶ್ಮೀರದ ಲಕ್ಷಾಂತರ ಯುವಕರನ್ನು ತಲುಪುತ್ತಿದೆ. ಅಂತೆಯೇ  ಮದರಸಾಗಳು ಮತ್ತು ಮಸೀದಿಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಕಲಿಸಲಾಗುತ್ತಿರುವ ಪಾಠಗಳು ಕೂಡ ಮೂಲಭೂತವಾದದತ್ತ ಮಕ್ಕಳನ್ನು ತಳ್ಳುತ್ತಿದ್ದು, ಇಂತಹ ಮದರಸಾ ಮತ್ತು ಮಸೀದಿಗಳ ಮೇಲೆ ಕೇಂದ್ರ ಸರ್ಕಾರ  ನಿಯಂತ್ರಣ ಹೇರಲೇಬೇಕು ಎಂದು ಬಿಪಿನ್ ರಾವತ್ ಹೇಳಿದ್ದಾರೆ.
ಅಂತೆಯೇ ಕಣಿವೆ ರಾಜ್ಯದಲ್ಲಿ ಹೆಚ್ಚೆಚ್ಚು ಪ್ರಮಾಣದಲ್ಲಿ ಪಬ್ಲಿಕ್ ಶಾಲೆಗಳು ಮತ್ತು ಹೆಚ್ಚೆಚ್ಚು ಸಿಬಿಎಸ್ ಇ ಪಠ್ಯಗಳಿರುವ ಶಾಲೆಗಳನ್ನು ತೆರೆಯಬೇಕು ಎಂದು ರಾವತ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT