ವೈರಮುತ್ತು 
ದೇಶ

ಹಿಂದೂ ದೇವತೆ ವಿರುದ್ಧ ಹೇಳಿಕೆ ವಿವಾದ: ತಮಿಳು ಗೀತರಚನಕಾರ ವೈರಮುತ್ತು ವಿರುದ್ಧ ಕೇಸ್

ಹಿಂದೂ ದೇವತೆ ಶ್ರೀವಿಲ್ಲಿಪುತ್ತೂರು ಕವಯಿತ್ರಿ ಆಂಡಾಳ್ ವಿರುದ್ಧ ಹೇಳಿಕೆ ನೀಡಿದ್ದ ಗೀತರಚನಕಾರ ವೈರಮುತ್ತು ವಿರುದ್ಧ ದೂರು ದಾಖಲಾಗಿದೆ...

ರಾಜಪಾಳಯಂ(ತಮಿಳುನಾಡು): ಹಿಂದೂ ದೇವತೆ ಶ್ರೀವಿಲ್ಲಿಪುತ್ತೂರು ಕವಯಿತ್ರಿ ಆಂಡಾಳ್ ವಿರುದ್ಧ ಹೇಳಿಕೆ ನೀಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಗೀತರಚನಕಾರ ವೈರಮುತ್ತು ವಿರುದ್ಧ ದೂರು ದಾಖಲಾಗಿದೆ. 
ಕವಯಿತ್ರಿ ಆಂಡಾಳ್ ಕುರಿತಾಗಿ ಚರ್ಚೆ ವೇಳೆ ತಮಿಳು ಗೀತರಚನಕಾರ ವೈರಮುತ್ತು ಅವರು ಆಂಡಾಳ್ ದೇವದಾಸಿ ಸಮುದಾಯಕ್ಕೆ ಸೇರಿದವರು ಎಂದು ಹೇಳಿದ್ದು ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು ವೈರಮುತ್ತು ವಿರುದ್ಧ ಕೇಸ್ ದಾಖಲಾಗಿದೆ. 
ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಅಮೆರಿಕದ ಇಂಡಿಯಾನಾ ವಿಶ್ವವಿದ್ಯಾಲಯದ ವಿದ್ವಾಂಸ ಸುಭಾಷ್ ಮಲಿಕ್ ಅಧ್ಯಯನದಲ್ಲಿ ಆಂಡಾಳ್ ದೇವದಾಸಿ ಸಮುದಾಯಕ್ಕೆ ಸೇರಿದವರು ಮತ್ತು ತಿರುಚಿರಾಪಳ್ಳಿಯ ಶ್ರೀರಂಗಂ ದೇವಾಲಯದಲ್ಲಿ ನೆಲೆಸಿದ್ದರು ಮತ್ತು ಅಲ್ಲೇ ಮಡಿದರು ಎಂಬ ವಿವರವನ್ನು ಉಲ್ಲೇಖಿಸಿದ್ದರು. 
ವೈರಮುತ್ತು ಅವರ ಹೇಳಿಕೆಯಿಂದ ಬೇಸರಗೊಂಡಿರುವ ಶ್ರೀ ಆಂಡಾಳ್ ದೇವಿಯ ಭಕ್ತ ಸೂರಿ ಎಂಬುವರು ವೈರಮುತ್ತು ವಿರುದ್ಧ ದೂರು ದಾಖಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT