ಪದ್ಮಾವತಿ 
ದೇಶ

ಪದ್ಮಾವತಿ ಬಿಡುಗಡೆಯಾದರೆ ಅಗ್ನಿ ಪ್ರವೇಶ ಮಾಡುವುದಾಗಿ ಮಹಿಳೆಯ ಬೆದರಿಕೆ

ಪದ್ಮಾವತ್ ಹೆಸರಿನಲ್ಲಿ ಬಿಡುಗಡೆಗೆ ತಯಾರಾಗಿರುವ ಪದ್ಮಾವತಿ ಚಿತ್ರದ ಬಿಡುಗಡೆಗೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಚಿತ್ರ ಬಿಡುಗಡೆ ಆಗಿದ್ದೇ ಆದಲ್ಲಿ ಅಗ್ನಿ ಪ್ರವೇಶ ಮಾಡುವುದಾಗಿ ಮಹಿಳೆಯೊಬ್ಬರು ಬೆದರಿಕೆ

ಜೈಪುರ: ಪದ್ಮಾವತ್ ಹೆಸರಿನಲ್ಲಿ ಬಿಡುಗಡೆಗೆ ತಯಾರಾಗಿರುವ ಪದ್ಮಾವತಿ ಚಿತ್ರದ ಬಿಡುಗಡೆಗೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಚಿತ್ರ ಬಿಡುಗಡೆ ಆಗಿದ್ದೇ ಆದಲ್ಲಿ ಅಗ್ನಿ ಪ್ರವೇಶ ಮಾಡುವುದಾಗಿ ಮಹಿಳೆಯೊಬ್ಬರು ಬೆದರಿಕೆ ಹಾಕಿದ್ದಾರೆ. 
ಚಿತ್ತೋರ್ಘರ್ ನಲ್ಲಿ ನಡೆದ ಸರ್ವಸಮಾಜ ಸಭೆಯಲ್ಲಿ ಪದ್ಮಾವತಿ ಚಿತ್ರದ ಬಿಡುಗಡೆಯಾದರೆ ಉಗ್ರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು, ಒಟ್ಟು 500 ಜನರು ಭಾಗವಹಿಸಿದ್ದ ಸಭೆಯಲ್ಲಿ 100 ಮಹಿಳೆಯರೂ ಇದ್ದರು. ಚಿತ್ರ ಬಿದುಗಡೆಯಾಗಿದ್ದೇ ಆದಲ್ಲಿ ರಜಪೂತ್ ಕರಣಿ ಸೇನಾ ರೈಲು ಹಾಗೂ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದೆ. 
ಇದೇ ವೇಳೆ ಮಹಿಳೆಯರೂ ಸಹ ಪದ್ಮಾವತಿ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಓರ್ವ ಮಹಿಳೆ ಪದ್ಮಾವತಿ ಚಿತ್ರ ಬಿಡುಗಡೆಯಾಗಿದ್ದೇ ಆದರೆ ಅಗ್ನಿ ಪ್ರವೇಶ(ಜೌಹಾರ್) ಮಾಡುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT