ಮಕರ ಜ್ಯೋತಿ 
ದೇಶ

ಮಕರ ಜ್ಯೋತಿ ದರ್ಶನ ಪಡೆದು ಪುನೀತರಾದ ಅಯ್ಯಪ್ಪ ಭಕ್ತರು

ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಪಡೆದ ಅಯ್ಯಪ್ಪ ಸ್ವಾಮಿ ಭಕ್ತರು ಪುನೀತರಾದರು...

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಪಡೆದ ಅಯ್ಯಪ್ಪ ಸ್ವಾಮಿ ಭಕ್ತರು ಪುನೀತರಾದರು.
ಸಂಕ್ರಮಣ ದಿನವಾದ ಇಂದು ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಸಂಜೆ ಮೂರು ಬಾರಿ ಮಕರ ಜ್ಯೋತಿ ಕಾಣಿಸಿಕೊಂಡಿತ್ತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಜ್ಯೋತಿಯನ್ನು ಕಣ್ತುಂಬಿಕೊಂಡರು.
ಯಾವುದೇ ಬೇದಭಾವವಿಲ್ಲದೆ ಕಡು ಬಡವರಿಂದ ಶ್ರೀಮಂತರವರೆಗೂ ಪ್ರತಿ ವರ್ಷವೂ ಶಬರಿಮಲೆಗೆ ಭಕ್ತಾದಿಗಳಾಗಿ ಆಗಮಿಸಿ ಅಯ್ಯಪ್ಪ ಸ್ವಾಮಿ ಹಾಗೂ ಜ್ಯೋತಿಯ ದರ್ಶನ ಪಡೆದು ಪುನೀತರಾಗುವರು.
ಲಕ್ಷಾಂತರ ಭಕ್ತರು ಮಕರ ಜ್ಯೋತಿಯಂದು ಶಬರಿಮಲೆಗೆ ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಬಂದೋಬಸ್ತ್ ಹಾಗೂ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಶಬರಿಮಲೆಗೆ ಕೇವಲ ದಕ್ಷಿಣ ಭಾರತ ರಾಜ್ಯಗಳಿಂದಷ್ಟೇ ಅಲ್ಲದೆ ಉತ್ತರ ಭಾರತದ ರಾಜ್ಯಗಳಿಂದಲೂ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT