ಭಾರತಕ್ಕೆ ಆಗಮಿಸಿದ ಇಸ್ರೇಲ್ ಪ್ರಧಾನಿ ಸ್ವಾಗತಿಸಿದ ಪ್ರಧಾನಿ ಮೋದಿ 
ದೇಶ

ನಮ್ಮದು ಸ್ವರ್ಗದಲ್ಲೇ ನಿಶ್ಚಯವಾದ ಸಂಬಂಧ: ಭಾರತದ ಕುರಿತು ಇಸ್ರೇಲ್ ಪ್ರಧಾನಿ ಹೇಳಿಕೆ

ನಮ್ಮದು ಸ್ವರ್ಗದಲ್ಲೇ ನಿಶ್ಟಯವಾದ ಸಂಬಂಧವಾಗಿದ್ದು, ರಾಜಧಾನಿ ಜೆರುಸಲೇಂ ವಿವಾದ ಕುರಿತ ವಿಶ್ವಸಂಸ್ಥೆ ಮತದಾನ ವಿಚಾರ ಉಭಯ ದೇಶಗಳ ನಡುವಿನ ಸಂಬಂಧದ ಪರಿಣಾಮ ಬೀರದು ಎಂದು ಭಾರತದ ಕುರಿತು ಇಸ್ರೇಲ್ ಪ್ರಧಾನಿ ನೆತಾನ್ಯಹು ಹೇಳಿದ್ದಾರೆ.

ನವದೆಹಲಿ: ನಮ್ಮದು ಸ್ವರ್ಗದಲ್ಲೇ ನಿಶ್ಟಯವಾದ ಸಂಬಂಧವಾಗಿದ್ದು, ರಾಜಧಾನಿ ಜೆರುಸಲೇಂ ವಿವಾದ ಕುರಿತ ವಿಶ್ವಸಂಸ್ಥೆ ಮತದಾನ ವಿಚಾರ ಉಭಯ ದೇಶಗಳ ನಡುವಿನ ಸಂಬಂಧದ ಪರಿಣಾಮ ಬೀರದು ಎಂದು ಭಾರತದ  ಕುರಿತು ಇಸ್ರೇಲ್ ಪ್ರಧಾನಿ ನೆತಾನ್ಯಹು ಹೇಳಿದ್ದಾರೆ.
6 ದಿನಗಳ ಭಾರತ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಹು ಅವರನ್ನು ಖುದ್ಧು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸ್ವಾಗತಿಸಿದರು. ಶಿಷ್ಟಾಚಾರ ಮೀರಿ ಭಾರತ  ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿ ಅವರನ್ನು ಸ್ವಾಗತಿಸಿದ್ದು, ಭಾರತ ಮತ್ತು ಇಸ್ರೇಲ್ ನಡುವಿನ ಬಾಂಧವ್ಯದ ಪ್ರತೀಕವಾಗಿದೆ. ಈ ವೇಳೆ ಭಾರತಕ್ಕೆ ಆಗಮಿಸಿ ಮಾತನಾಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್  ನೆತಾನ್ಯಹು ಅವರು, ತಮ್ಮ ಭಾರತ ಭೇಟಿಯಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದರು.
ಇದೇ ವೇಳೆ ವಿಶ್ವಸಂಸ್ಥೆಯಲ್ಲಿ ರಾಜಧಾನಿ ಜೆರುಸಲೇಂ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ಧ  ಭಾರತ ಮತದಾನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ನೆತಾನ್ಯಹು, ಖಂಡಿತಾ ಭಾರತದ ನಡೆ ಬೇಸರ  ಮೂಡಿಸಿತ್ತು. ಆದರೆ ಒಂದು ನಕಾರಾತ್ಮಕ ಮತ ಉಭಯ ದೇಶಗಳ ನಡುವಿನ ಸಂಬಂಧದ ಮೇಲೆ ಪರಿಣಾಮ ಬೀರದು. ಆದರೆ ನಾವು ಇವೆಲ್ಲವನ್ನೂ ಬದಿಗೊತ್ತಿ ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಹೇಳಿದರು. ಅಂತೆಯೇ  ಭಾರತ ಮತ್ತು ಇಸ್ರೇಲ್ ಸಂಬಂಧವನ್ನು ಸ್ವರ್ಗದಲ್ಲಿ ನಿಶ್ಚಯವಾದ ಸಂಬಂಧ ಎಂದು ಬಣ್ಣಿಸಿದ ನೇತನ್ಯಹು, ಸಾಕಷ್ಟು ಕ್ಷೇತ್ರಗಳಲ್ಲಿ ಉಭಯ ದೇಶಗಳು ಸೌಹಾರ್ಧ ಸಂಬಂಧ ಗಟ್ಟಿಗೊಳಿಸಿಕೊಳ್ಳಬೇಕಿದೆ. ರಕ್ಷಣೆ, ಕೃಷಿ,  ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಸಹಕಾರ ಅತ್ಯಗತ್ಯ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT