ಸುಪ್ರೀಂ ಕೋರ್ಟ್ 
ದೇಶ

ಮಣಿಪುರ ನಕಲಿ ಎನ್ ಕೌಂಟರ್ ಪ್ರಕರಣದ ವಿಚಾರಣೆ: ಸಿಬಿಐ ಎಸ್ಐಟಿ ಬಗ್ಗೆ ಸುಪ್ರೀಂ ಅಸಮಾಧಾನ

ಮಣಿಪುರದಲ್ಲಿ ಸೇನೆ ನಡೆಸಿದೆ ಎನ್ನಲಾದ ನಕಲಿ ಎನ್ ಕೌಂಟರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ನ ವಿಶೇಷ ತನಿಖಾ ತಂಡದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ: ಮಣಿಪುರದಲ್ಲಿ ಸೇನೆ ನಡೆಸಿದೆ ಎನ್ನಲಾದ ನಕಲಿ ಎನ್ ಕೌಂಟರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ನ ವಿಶೇಷ ತನಿಖಾ ತಂಡದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 
ಕಳೆದ ವಿಚಾರಣೆ ವೇಳೆಯಲ್ಲಿ ಸೂಚನೆ ನೀಡಿದಷ್ಟು ಸಂಖ್ಯೆಯಲ್ಲಿ ಎಫ್ಐಆರ್ ಗಳನ್ನು ದಾಖಲಿಸದೇ ಇದ್ದ ಹಿನ್ನೆಲೆಯಲ್ಲಿ ಕೋರ್ಟ್ ಎಸ್ಐಟಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಕಳೆದ ವಿಚಾರಣೆ ವೇಳೆ ಜ.31 ರ ಒಳಗಾಗಿ 30 ಎಫ್ಐಆರ್ ಗಳನ್ನು ದಾಖಲಿಸುವಂತೆ ಕೋರ್ಟ್ ಸೂಚನೆ ನೀಡಿತ್ತು. ಆದರೆ ಎಸ್ಐಟಿ ಈ ವರೆಗೂ ಕೇವಲ 12 ಎಫ್ ಐಆರ್ ಗಳನ್ನು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾ.ಮದನ್ ಬಿ.ಲೋಕುರ್ ಹಾಗೂ ಯುಯು ಲಲಿತ್ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆಯನ್ನು ಈ ವರ್ಷದ ಫೆ.28 ಒಳಗೆ ಮುಕ್ತಾಯಗೊಳಿಸಿ ಅಂತಿಮ ವರದಿ ನೀಡಬೇಕೆಂದು ಸೂಚನೆ ನೀಡಿದ್ದಾರೆ. 
ಕಳೆದ ವರ್ಷ ಜುಲೈ 14 ರಂದು ಕೋರ್ಟ್ 30 ಎಫ್ಐಆರ್ ಗಳನ್ನು ದಾಖಲಿಸುವಂತೆ ಸೂಚಿಸಿತ್ತು. ಅಂದಿನಿಂದ ಇಂದಿನವರೆಗಿನ ಸ್ಥಿತಿ-ಗತಿ ವರದಿಗಳನ್ನೂ ಸಲ್ಲಿಕೆ ಮಾಡುವಂತೆ ಕೋರ್ಟ್ ಸೂಚನೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT