ನಟ ಕಮಲ್ ಹಾಸನ್ (ಸಂಗ್ರಹ ಚಿತ್ರ) 
ದೇಶ

ಫೆಬ್ರವರಿ 21ರಂದು ನಟ ಕಮಲ್ ಹಾಸನ್ ಹೊಸ ಪಕ್ಷದ ಹೆಸರು ಘೋಷಣೆ!

ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ಸ್ಥಾಪನೆ ಕುರಿತು ಘೋಷಣೆಯಾದ ಬೆನ್ನಲ್ಲೇ ದಕ್ಷಿಣ ಭಾರತದ ಮತ್ತೋರ್ವ ಖ್ಯಾತ ನಟ ಕಮಲ್ ಹಾಸನ್ ಹೊಸ ಪಕ್ಷ ಕಟ್ಟುವ ನಿರ್ಧಾರಕ್ಕೆ ಬಂದಿದ್ದು, ಇದೇ ಫೆಬ್ರವರಿ 21ರಂದು ತಮ್ಮ ಪಕ್ಷದ ಹೆಸರು ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ಸ್ಥಾಪನೆ ಕುರಿತು ಘೋಷಣೆಯಾದ ಬೆನ್ನಲ್ಲೇ ದಕ್ಷಿಣ ಭಾರತದ ಮತ್ತೋರ್ವ ಖ್ಯಾತ ನಟ ಕಮಲ್ ಹಾಸನ್ ಹೊಸ ಪಕ್ಷ ಕಟ್ಟುವ ನಿರ್ಧಾರಕ್ಕೆ ಬಂದಿದ್ದು, ಇದೇ ಫೆಬ್ರವರಿ 21ರಂದು  ತಮ್ಮ ಪಕ್ಷದ ಹೆಸರು ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ನಟ ಕಮಲ್ ಹಾಸನ್ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಫೆಬ್ರವರಿ 21 ರಂದು ಘೋಷಣೆ ಮಾಡಲಿದ್ದು, ಅಲ್ಲದೆ, ತಮ್ಮ ಪಕ್ಷದ ಸಿದ್ಧಾಂತಗಳು, ಗುರಿಗಳೇನು ಎಂಬುದನ್ನೂ ಅವರು ಇದೇ ಸಂದರ್ಭದಲ್ಲಿ ಬಹಿರಂಗ ಪಡಿಸಲಿದ್ದಾರೆ  ಎಂದು ತಿಳಿದುಬಂದಿದೆ. ಅಂತೆಯೇ ಫೆಬ್ರವರಿ 21 ರಿಂದ ತಮಿಳುನಾಡಿನಾದ್ಯಂತ ಪ್ರವಾಸ ಕೈಗೊಳ್ಳಲಿರುವ ಕಮಲ್ ಹಾಸನ್ ಅದೇ ದಿನ ಪಕ್ಷದ ಹೆಸರನ್ನು ಘೋಷಿಸಲಿದ್ದಾರೆ. 
ಮೂಲಗಳ ಪ್ರಕಾರ ನಟ ಕಮಲ್ ಹಾಸನ್ ಅವರ ಮೂಲ ಊರಾದ ರಾಮನಾಥಪುರಂನಿಂದಲೇ ಅವರ ರಾಜ್ಯ ಪ್ರವಾಸ ಆರಂಭವಾಗಲಿದೆಯಂತೆ. ಬಳಿಕ ಮಧುರೈ, ದಿಂಡಿಗುಲ್ ಮತ್ತು ಶಿವಗಂಗೈ ಗಳಲ್ಲಿ ಕಮಲ್,  ಸ್ಥಳೀಯರೊಂದಿಗೆ ಸಂವಾದ ಸಹ ನಡೆಸಲಿದ್ದಾರೆ.
ಕಳೆದ 2017 ರ ನವೆಂಬರ್ ನಲ್ಲಿ ರಾಜಕೀಯ ಪಕ್ಷ ಸ್ಥಾಪಿಸುವ ಕುರಿತು ಸೂಚನೆ ನೀಡಿದ್ದ ಕಮಲ್ ಹಾಸನ್, ತಮ್ಮ ಉದ್ದೇಶ ಖಂಡಿತ ಪ್ರಚಾರ ಗಳಿಸುವುದಲ್ಲ ಎದು ಸ್ಪಷ್ಟಪಡಿಸಿದ್ದರು. "ನಾನು ಯಾವುದೇ ಪ್ರಚಾರಕ್ಕಾಗಲಿ  ರಾಜಕೀಯಕ್ಕೆ ಬರುತ್ತಿಲ್ಲ. ಅಥವಾ ನಾನೊಬ್ಬ ಬಂಡಾಯ ನಾಯಕ ಎಂದೂ ಭಾವಿಸಬೇಕಿಲ್ಲ. ನನಗೆ ನನ್ನ ಜನರನ್ನು ಅರ್ಥಮಾಡಿಕೊಳ್ಳುವುದಕ್ಕೆ ರಾಜಕೀಯವೊಂದು ಅತ್ಯಂತ ಪರಿಣಾಮಕಾರಿ ಮಾರ್ಗ ಎಂದು ನಾನು  ಭಾವಿಸಿದ್ದೇನೆ. ಕಲಿಯುವುದಕ್ಕೆ ಮತ್ತು ಜನ ಸೇವೆ ಮಾಡುವುದಕ್ಕೆ ಇದೊಂದು ಉತ್ತಮ ಅವಕಾಶ".  ಎಂದು ಅವರು ಹೇಳಿದ್ದರು. ಅಂತೆಯೇ ಅಕಸ್ಮಾತ್ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಿಸಿದರೆ ನಾನು ಅವರ  ಜೊತೆ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಸಹ ಕಳೆದ ಸೆಪ್ಟೆಂಬರ್ ನಲ್ಲಿ ಕಮಲ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT