ದೇಶ

ಇಸ್ರೇಲ್ ನಿಂದ ಭಾರತಕ್ಕೆ ಗಾಲ್ ಮೊಬೈಲ್ ಗಿಪ್ಟ್

ಭಾರತ ಪ್ರವಾಸದಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಭಾರತಕ್ಕೆ ಭರ್ಜರಿ ಉಡುಗೊರೆ ನೀಡಿದ್ದು, ಸಮುದ್ರದ ನೀರನ್ನು ಕುಡಿಯುವ ನೀರಾಗಿ ಶುದ್ಧೀಕರಿಸುವ ಮೊಬೈಲ್ ಘಟಕವನ್ನು ಭಾರತಕ್ಕೆ ನೀಡಿದ್ದಾರೆ.

ಅಹಮದಾಬಾದ್; ಭಾರತ ಪ್ರವಾಸದಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಭಾರತಕ್ಕೆ ಭರ್ಜರಿ ಉಡುಗೊರೆ ನೀಡಿದ್ದು, ಸಮುದ್ರದ ನೀರನ್ನು ಕುಡಿಯುವ ನೀರಾಗಿ ಶುದ್ಧೀಕರಿಸುವ ಮೊಬೈಲ್ ಘಟಕವನ್ನು ಭಾರತಕ್ಕೆ  ನೀಡಿದ್ದಾರೆ.

ಈ ಮೊಬೈಲ್ ಗಾಲ್ ವಾಹನ  ಈಗಾಗಲೇ ಭಾರತಕ್ಕೆ ಆಗಮಿಸಿದ್ದು, ಬನಸ್ಕಾಂತ ಜಿಲ್ಲೆಯಲ್ಲಿ ಚಾಲನೆ ನೀಡಲಾಯಿತು.  ಅಹ್ಮದಾಬಾದಿನ ಡಿಯೋ ದೋಲೇರಾ ಗ್ರಾಮದಲ್ಲಿ ಸ್ಥಾಪಿಸಿರುವ ಐ ಕ್ರಿಯೆಟ್ ನೀರು ಶುದ್ಧೀಕರಣ ಕೇಂದ್ರದ ಉದ್ಘಾಟನಾ  ಸಮಾರಂಭದಲ್ಲಿ  ನರೇಂದ್ರಮೋದಿ ಹಾಗೂ ನೇತಾನ್ಯಾಹು ಪಾಲ್ಗೊಂಡರು. ನಂತರ ಅತ್ಯಾಧುನಿಕ ಬೀಜ ಉತ್ಪಾದನಾ  ಘಟಕ ಸ್ಥಾಪನೆ  ಸೇರಿದಂತೆ ಹಲವು ಮಹತ್ವದ ಒಪ್ಪಂದಗಳಿಗೆ ಉಭಯ ದೇಶಗಳ ನಾಯಕರು ಸಹಿ ಹಾಕಿದರು.

ಇದಕ್ಕೂ ಮುನ್ನ  ಬೆಂಜಮಿನ್ ನೇತಾನ್ಯಾಹು, ಅವರ ಪತ್ನಿ ಸಾರಾ ಅವರು ಅಹಮದಾಬಾದಿನಲ್ಲಿ ಪ್ರಧಾನಿ ನರೇಂದ್ರಮೋದಿಯೊಂದಿಗೆ ಭರ್ಜರಿ ರೋಡ್ ಶೋ ನಡೆಸಿದರು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಆರಂಭಗೊಂಡ ರೋಡ್ ಶೋ ,ಸಬರಮತಿ ಆಶ್ರಮದವರೆಗೂ ಸುಮಾರು 8 ಕಿಲೋ ಮೀಟರ್ ದೂರ ಸಾಗಿತು. ಸಬರಮತಿ ಆಶ್ರಮದಲ್ಲಿ ಮಹಾತ್ಮಗಾಂಧಿ ಚರಕದಲ್ಲಿ ಹತ್ತಿದಾರ ನೇಯುವ ಮೂಲಕ ನೇತ್ಯಾನಹು ವಿಶಿಷ್ಠ ಅನುಭವ ಪಡೆದರು.ವೀಕ್ಷಕರ ಪುಸ್ತಕದಲ್ಲಿ ಸಹಿ ಹಾಕಿದ ನೇತಾನಾಹ್ಯು ದಂಪತಿ, ಭೇಟಿ ವೇಳೆ ಮಹಾನ್ ಮಾನವತಾವಾದಿ ಮಹಾತ್ಮಗಾಂಧಿ ಅವರ ತತ್ತ್ವ ಆದರ್ಶಗಳಿಂದ ಪ್ರಭಾವಿತನಾಗಿರುವುದಾಗಿ ಪುಸ್ತಕದಲ್ಲಿ ನಮೂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT