ಹೆಚ್ ಡಿ ಕುಮಾರಸ್ವಾಮಿ 
ದೇಶ

ಗಣಿಗಾರಿಕೆ ಹಗರಣದ ಕುರಿತು ಕುಮಾರಸ್ವಾಮಿ ಆರೋಪ ಅರ್ಧಸತ್ಯ: ಸಚಿವ ವಿನಯ್ ಕುಲಕರ್ಣಿ

5,450 ಕೋಟಿ ರೂಪಾಯಿ ಗಣಿಗಾರಿಕೆ ಹಗರಣದ ನಡೆದಿರುವುದರ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ವಿನಯ್ ಕುಲಕರ್ಣಿ, ಕುಮಾರಸ್ವಾಮಿ ಅವರ ಆರೋಪ ಅರ್ಧ ಸತ್ಯ ಎಂದು ಹೇಳಿದ್ದಾರೆ.

ಬೆಂಗಳೂರು: 5,450 ಕೋಟಿ ರೂಪಾಯಿ ಗಣಿಗಾರಿಕೆ ಹಗರಣದ ನಡೆದಿರುವುದರ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ವಿನಯ್ ಕುಲಕರ್ಣಿ, ಕುಮಾರಸ್ವಾಮಿ ಅವರ ಆರೋಪ ಅರ್ಧ ಸತ್ಯ ಎಂದು ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿರುವ ವಿನಯ್ ಕುಲಕರ್ಣಿ, ಕುಮಾರಸ್ವಾಮಿ ಅವರ ಆರೋಪಗಳನ್ನು ತಳ್ಳಿಹಾಕಿದ್ದು, ಕುಮಾರಸ್ವಾಮಿ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಗಣಿಗಾರಿಕೆ ನಡೆಸುತ್ತಿರುವ ಪ್ರದೇಶದಲ್ಲಿ ಇಟ್ಟಿರುವ ಪುಸ್ತಕಕ್ಕೂ ಹಾಗೂ ಸಂಸ್ಥೆಯ ಲೆಕ್ಕ ಪುಸ್ತಕದಲ್ಲಿನ ಅಂಕಿ-ಅಂಶಗಳಿಗೂ ಸಣ್ಣ ವ್ಯತ್ಯಾಸವಿದೆಯಷ್ಟೇ, ಈ ಬಗ್ಗೆ ಪ್ರಾಥಮಿಕ ವರದಿಗಳನ್ನಾಧರಿಸಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. 
ಕುಮಾರಸ್ವಾಮಿ ಅವರು ಆರೋಪಿಸಿರುವ ಅಕ್ರಮಗಳ ಪ್ರಮಾಣದ ಬಗ್ಗೆಯೂ ಮಾತನಾಡಿರುವ ವಿನಯ್ ಕುಲಕರ್ಣಿ, ಕುಮಾರಸ್ವಾಮಿ ಅವರ ಆರೋಪದಂತೆ ಹಗರಣ ನಡೆಯಬೇಕಾದರೆ ಸುಬ್ಬರಾಯನಹಳ್ಳಿ ಮತ್ತು ತಿಮ್ಮಪ್ಪನಗುಡಿ ಪ್ರದೇಶದಲ್ಲಿ ನಡೆದಿದ್ದ ಗಣಿಗಾರಿಕೆ ಪ್ರದೇಶದಿಂದ 2000 ಟ್ರಕ್ ನಷ್ಟು ಅದಿರನ್ನು ಸಾಗಿಸಬೇಕಾಗುತ್ತದೆ. ಆದರೆ ಕಡಿಮೆಯೆಂದರೂ ಪ್ರತಿ ದಿನ 800 ಟ್ರಕ್ ಲೋಡ್ ನಷ್ಟು ಅದಿರು ಮಾತ್ರ ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT