ದಾಳಿ ವೇಳೆ ಸಿಕ್ಕ ನಿಷೇಧಿತ ನೋಟುಗಳು 
ದೇಶ

ಕಾನ್ಪುರ: ಬೀಗ ಹಾಕಿದ್ದ ಮನೆಯಲ್ಲಿ ಕೈ ಹಾಕಿದಲ್ಲೆಲ್ಲಾ ರಾಶಿ-ರಾಶಿ ದುಡ್ಡಿನ ಕಂತೆಗಳು!

ಬೀಗ ಹಾಕಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದ ವೇಳೆ ಕೈಹಾಕಿದ ಜಾಗದಲ್ಲೆಲ್ಲಾ ಕೋಟಿ ಕೋಟಿ ಹಣ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬುಧವಾರ ನಡೆದಿದೆ.

ಕಾನ್ಪುರ: ಬೀಗ ಹಾಕಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದ ವೇಳೆ ಕೈಹಾಕಿದ ಜಾಗದಲ್ಲೆಲ್ಲಾ ಕೋಟಿ ಕೋಟಿ ಹಣ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬುಧವಾರ ನಡೆದಿದೆ.
ರಾಷ್ಟ್ರೀಯ ತನಿಖಾ ದಳ ಹಾಗೂ ಪೊಲೀಸರು ನಡೆಸಿದ ಜಂಟಿ ದಾಳಿಯಲ್ಲಿ ಸುಮಾರು 100 ಕೋಟಿಗೂ ಅಧಿಕ ಮೌಲ್ಯದ ನಿಷೇಧಿತ ನೋಟುಗಳನ್ನು ಕಾನ್ಪುರದ ಮನೆಯೊಂದರಲ್ಲಿ ಪತ್ತೆಹಚ್ಚಲಾಗಿದೆ. ಇನ್ಸ್​ಪೆಕ್ಟರ್​ ಜನರಲ್​  ಅಲೋಕ್​ ಸಿಂಗ್​ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಖಚಿತ ಮಾಹಿತಿ ಆಧಾರಿಸಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.  ಸುಮಾರು ದಿನಗಳಿಂದ ಬೀಗ ಹಾಕಲಾಗಿದ್ದ ಮನೆಯೊಂದರಲ್ಲಿ ಇಷ್ಟು ದೊಡ್ಡ ಮೊತ್ತದ ನಿಷೇಧಿತ  ನೋಟುಗಳು ಪತ್ತೆಯಾಗಿದ್ದು, ಈ ಸಂಬಂಧ ಅಧಿಕಾರಿಗಳು ಓರ್ವ ವ್ಯಕ್ತಿಯನ್ನು ಕೂಡ ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಹಳೆಯ ನಿಷೇಧಿತ ನೋಟುಗಳನ್ನು ಹೊಸ ನೋಟುಗಳಿಗೆ ವಿನಿಮಯ ಮಾಡಿಕೊಡುವುದಾಗಿ  ಬಂಧಿತ ವ್ಯಕ್ತಿ ಭರವಸೆ ನೀಡಿದ್ದನಂತೆ. 
ಇದೇ ಕಾರಣಕ್ಕೆ ಹಲವು ಪ್ರಭಾವಿಗಳು ಈತನಿಗೆ ಹಳೆಯ ನೋಟುಗಳನ್ನು ನೀಡಿದ್ದರು ಎನ್ನಲಾಗಿದೆ. ಪ್ರಸ್ತುತ ತನಿಖಾ ದೃಷ್ಟಿಯಿಂದ ಆತನ ಹೆಸರನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. ಇನ್ನು ಪ್ರಸ್ತುತ  ದೊರೆತಿರುವ ಹಣದ ಮೌಲ್ಯ ಅಂದಾಜು 100 ಕೋಟಿ ರು. ಎಂದು ಶಂಕಿಸಲಾಗಿದ್ದು, ರಿಸರ್ವ್​ ಬ್ಯಾಂಕ್​ ಹಾಗೂ ಆದಾಯ ತೆರಿಗೆ ಇಲಾಖೆಯ ತಂಡ ಈ ಬಗ್ಗೆ ಖಚಿತ ಮಾಹಿತಿ ನೀಡಲಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.
ನಿಷೇಧಿತ ನೋಟುಗಳ ಜಾಲದ ಹಿಂದೆ ಸರ್ಕಾರಿ ನೌಕರರು ಭಾಗಿಯಾಗಿರುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​ ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT