ರೈಸಿನಾ ಸಂವಾದದಲ್ಲಿ ಸುಷ್ಮಾ ಸ್ವರಾಜ್ 
ದೇಶ

ಎಲ್ಲ ಸಮಸ್ಯೆಗಳಿಗೂ ಭಯೋತ್ಪಾದನೆಯೇ ಮೂಲ ಕಾರಣ: ರೈಸಿನಾ ಸಂವಾದದಲ್ಲಿ ಸುಷ್ಮಾ ಹೇಳಿಕೆ

ಪ್ರಸ್ತುತ ವಿಶ್ವ ಸಮುದಾಯ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಭಯೋತ್ಪಾದನೆಯೇ ಮೂಲ ಕಾರಣ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ನವದೆಹಲಿ: ಪ್ರಸ್ತುತ ವಿಶ್ವ ಸಮುದಾಯ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಭಯೋತ್ಪಾದನೆಯೇ ಮೂಲ ಕಾರಣ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ರೈಸಿನಾ ಸಂವಾದದಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು, ಭಯೋತ್ಪಾದನೆ ಕುರಿತ ಭಾರತದ ನಿಲುವು ಹಲವು ದಶಕಗಳಿಂದಲೂ ಒಂದೇ ಆಗಿದೆ. ದಿನಗಳೆದಂತೆ ಭಯೋತ್ಪಾದನೆ ಎಂಬುದು  ನಾಶಪಡಿಸಲಾಗದ ಸಮಸ್ಯೆಯಾಗಿ ಪರಿಣಮಿಸಿದ್ದು, ಭಯೋತ್ಪಾದನೆಯನ್ನು ಬುಡಸಹಿತ ಕಿತ್ತೊಗೆಯುವವರೆಗೂ ಅದು ನಾಶವಾಗುವುದಿಲ್ಲ. ಡಿಜಿಟಲ್ ಯುಗದಲ್ಲಿ ಭಯೋತ್ಪಾದನೆ ಕೂಡ ಆಧುನೀಕರಣಗೊಳ್ಳುತ್ತಿದ್ದು, ಮೊದಲು  ಭಯೋತ್ಪಾದಕರಿಗೆ ನೆರವು ನೀಡುತ್ತಿರುವ ರಾಷ್ಟ್ರಗಳನ್ನು ಗುರುತಿಸಿ ಅವುಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ಕಿಡಿಕಾರಿದರು.
ಹಿಂದೊಮ್ಮೆ ಭಯೋತ್ಪಾದನೆ ಎಂಬುದು ಕೇವಲ ಕೆಲ ದೇಶಗಳ ಸಮಸ್ಯೆಯಾಗಿ ಮಾತ್ರ ಇತ್ತು. ಆದರೆ ಇದೀಗ ಭಯೋತ್ಪಾದನೆ ಜಾಗತಿಕ ಸಮಸ್ಯೆಯಾಗಿ ಬದಲಾಗಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದರು. ಅಂತೆಯೇ ಮುಂಬೈ  ದಾಳಿ ಪ್ರಕರಣ, ಉರಿ ಸೆಕ್ಟರ್ ಮೇಲಿನ ಉಗ್ರ ದಾಳಿ ಪ್ರಕರಣಗಳ ಕುರಿತು ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಸುಷ್ಮಾ ಸ್ವರಾಜ್, ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳೂ ಕೂಡ ಈ ಸಮಸ್ಯೆಗಳಿಗೆ  ಕಾರಣವಾಗುತ್ತಿದೆ. ಭಯೋತ್ಪಾದನೆಯನ್ನೂ ಕೂಡ ತಮ್ಮ ಅನುಕೂಲಕ್ಕೆ ಬಳಕೆ ಮಾಡುತ್ತಿರುವ ರಾಷ್ಟ್ರಗಳನ್ನು ಮೊದಲು ಗುರುತಿಸಿ ನಿಯಂತ್ರಿಸಬೇಕಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT