ರೈಸಿನಾ ಸಂವಾದದಲ್ಲಿ ಸುಷ್ಮಾ ಸ್ವರಾಜ್ 
ದೇಶ

ಎಲ್ಲ ಸಮಸ್ಯೆಗಳಿಗೂ ಭಯೋತ್ಪಾದನೆಯೇ ಮೂಲ ಕಾರಣ: ರೈಸಿನಾ ಸಂವಾದದಲ್ಲಿ ಸುಷ್ಮಾ ಹೇಳಿಕೆ

ಪ್ರಸ್ತುತ ವಿಶ್ವ ಸಮುದಾಯ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಭಯೋತ್ಪಾದನೆಯೇ ಮೂಲ ಕಾರಣ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ನವದೆಹಲಿ: ಪ್ರಸ್ತುತ ವಿಶ್ವ ಸಮುದಾಯ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಭಯೋತ್ಪಾದನೆಯೇ ಮೂಲ ಕಾರಣ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ರೈಸಿನಾ ಸಂವಾದದಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು, ಭಯೋತ್ಪಾದನೆ ಕುರಿತ ಭಾರತದ ನಿಲುವು ಹಲವು ದಶಕಗಳಿಂದಲೂ ಒಂದೇ ಆಗಿದೆ. ದಿನಗಳೆದಂತೆ ಭಯೋತ್ಪಾದನೆ ಎಂಬುದು  ನಾಶಪಡಿಸಲಾಗದ ಸಮಸ್ಯೆಯಾಗಿ ಪರಿಣಮಿಸಿದ್ದು, ಭಯೋತ್ಪಾದನೆಯನ್ನು ಬುಡಸಹಿತ ಕಿತ್ತೊಗೆಯುವವರೆಗೂ ಅದು ನಾಶವಾಗುವುದಿಲ್ಲ. ಡಿಜಿಟಲ್ ಯುಗದಲ್ಲಿ ಭಯೋತ್ಪಾದನೆ ಕೂಡ ಆಧುನೀಕರಣಗೊಳ್ಳುತ್ತಿದ್ದು, ಮೊದಲು  ಭಯೋತ್ಪಾದಕರಿಗೆ ನೆರವು ನೀಡುತ್ತಿರುವ ರಾಷ್ಟ್ರಗಳನ್ನು ಗುರುತಿಸಿ ಅವುಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ಕಿಡಿಕಾರಿದರು.
ಹಿಂದೊಮ್ಮೆ ಭಯೋತ್ಪಾದನೆ ಎಂಬುದು ಕೇವಲ ಕೆಲ ದೇಶಗಳ ಸಮಸ್ಯೆಯಾಗಿ ಮಾತ್ರ ಇತ್ತು. ಆದರೆ ಇದೀಗ ಭಯೋತ್ಪಾದನೆ ಜಾಗತಿಕ ಸಮಸ್ಯೆಯಾಗಿ ಬದಲಾಗಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದರು. ಅಂತೆಯೇ ಮುಂಬೈ  ದಾಳಿ ಪ್ರಕರಣ, ಉರಿ ಸೆಕ್ಟರ್ ಮೇಲಿನ ಉಗ್ರ ದಾಳಿ ಪ್ರಕರಣಗಳ ಕುರಿತು ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಸುಷ್ಮಾ ಸ್ವರಾಜ್, ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳೂ ಕೂಡ ಈ ಸಮಸ್ಯೆಗಳಿಗೆ  ಕಾರಣವಾಗುತ್ತಿದೆ. ಭಯೋತ್ಪಾದನೆಯನ್ನೂ ಕೂಡ ತಮ್ಮ ಅನುಕೂಲಕ್ಕೆ ಬಳಕೆ ಮಾಡುತ್ತಿರುವ ರಾಷ್ಟ್ರಗಳನ್ನು ಮೊದಲು ಗುರುತಿಸಿ ನಿಯಂತ್ರಿಸಬೇಕಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT