ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು 
ದೇಶ

ಜಮ್ಮುವಿನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಯೋಧ ಹುತಾತ್ಮ, ಯುವತಿ ಸಾವು, 11 ಜನರಿಗೆ ಗಾಯ

ಜಮ್ಮು-ಕಾಶ್ಮೀರದ ಆರ್.ಎಸ್.ಪುರ ವಲಯದಲ್ಲಿ ಮತ್ತೆ ಪಾಕಿಸ್ತಾನ ಕದನ ...

ಜಮ್ಮು: ಜಮ್ಮು-ಕಾಶ್ಮೀರದ ಆರ್.ಎಸ್.ಪುರ ವಲಯದಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ನಿನ್ನೆ ರಾತ್ರಿ ನಡೆದ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬ ಯುವತಿ ಸಾವಿಗೀಡಾಗಿದ್ದಾಳೆ. 
ನಿನ್ನೆ ಆರ್.ಎಸ್.ಪುರದ ವಲಯದಲ್ಲಿ ಪಾಕಿಸ್ತಾನ ದಾಳಿಗೆ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದು, 17 ವರ್ಷದ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಮೂವರು ನಾಗರಿಕರು ಗಾಯಗೊಂಡಿದ್ದಾರೆ.
ಗಡಿ ಭದ್ರತಾ ಪಡೆ ಪಾಕಿಸ್ತಾನ ಸೇನೆಯ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದೆ. ಗುಂಡಿನ ಚಕಮಕಿ ಇನ್ನೂ ಕೂಡ ಅಲ್ಲಿ ಮುಂದುವರಿದಿದೆ. 
ಇನ್ನೊಂದೆಡೆ ಕತುವಾ ನಗರದ ಹಿರಾನಗರ ವಲಯದಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಐವರು ನಾಗರಿಕರು ಗಾಯಗೊಂಡಿದ್ದು, ಇದುವರೆಗೆ ಗಾಯಗೊಂಡವರ ಸಂಖ್ಯೆ 11ಕ್ಕೇರಿದೆ. 
ಜಮ್ಮುವಿನ ಪೂಂಚ್ ವಲಯದ ಗಡಿ ಭಾಗದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಎರಡು ದಿನಗಳ ಹಿಂದೆ ನಾಲ್ವರು ಪಾಕಿಸ್ತಾನ ಸೈನಿಕರನ್ನು ಕೊಂದು ಹಾಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT