ಸೆನ್ಸಾರ್ ಬೋರ್ಡ್ ಅಧ್ಯಕ್ಷ ಪ್ರಸೂನ್ ಜೋಶಿ ಸಾಂಧರ್ಬಿಕ ಚಿತ್ರ 
ದೇಶ

ಜೈಪುರ ಸಾಹಿತ್ಯೋತ್ಸವದಲ್ಲಿ ಸೆನ್ಸಾರ್ ಬೋರ್ಡ್ ಮುಖ್ಯಸ್ಥರು ಪಾಲ್ಗೊಳ್ಳಲು ಬಿಡಲ್ಲ: ಕರ್ನಿ ಸೇನಾ

ರಾಜಸ್ತಾನದ ರಾಜಧಾನಿ ಜೈಪುರದಲ್ಲಿ ಇದೇ ತಿಂಗಳ 25 ರಿಂದ ಜೈಪುರ ಸಾಹಿತ್ಯೋತ್ಸವ ಪ್ರಾರಂಭಗೊಳ್ಳಲಿದ್ದು, ಈ ಉತ್ಸವದಲ್ಲಿ ಸೆನ್ಸಾರ್ ಬೋರ್ಡ್ ಅಧ್ಯಕ್ಷ ಪ್ರಸೂನ್ ಜೋಶಿ ಪಾಲ್ಗೊಳ್ಳಲು ಬಿಡಲ್ಲ ಎಂದು ರಜಪೂತ್ ಕರ್ನಿ ಸೇನಾ ಪೇಳಿದೆ.

ರಾಜಸ್ತಾನ ; ರಾಜಸ್ತಾನದ ರಾಜಧಾನಿ ಜೈಪುರದಲ್ಲಿ ಇದೇ ತಿಂಗಳ 25 ರಿಂದ ಜೈಪುರ ಸಾಹಿತ್ಯೋತ್ಸವ ಪ್ರಾರಂಭಗೊಳ್ಳಲಿದ್ದು, ಈ ಉತ್ಸವದಲ್ಲಿ ಸೆನ್ಸಾರ್ ಬೋರ್ಡ್ ಅಧ್ಯಕ್ಷ  ಪ್ರಸೂನ್ ಜೋಶಿ ಪಾಲ್ಗೊಳ್ಳಲು ಬಿಡಲ್ಲ ಎಂದು ರಜಪೂತ್ ಕರ್ನಿ ಸೇನಾ ಪೇಳಿದೆ.

ಅಲ್ಲದೇ, ಪದ್ಮಾವತ್ ಚಿತ್ರ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮುಂದೆ ರಾಜಸ್ತಾನದಲ್ಲಿ ಯಾವುದೇ ಚಿತ್ರ ಚಿತ್ರೀಕರಿಸಲು ಅವಕಾಶ ಕೊಡಲ್ಲ ಎಂದು  ಕರ್ನಿ ಸೇನಾ ಮುಖಂಡರು ತಿಳಿಸಿದ್ದಾರೆ.

ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ  ಮಧ್ಯಪ್ರದೇಶ, ಹರಿಯಾಣ, ರಾಜಸ್ತಾನ  ಹಾಗೂ ಗುಜರಾತ್ ರಾಜ್ಯಗಳಲ್ಲಿ ಹೇರಿದ್ದ ನಿಷೇಧವನ್ನು ನಿನ್ನೆಯಷ್ಟೇ ಸುಪ್ರೀಂಕೋರ್ಟ್ ತೆರವುಗೊಳಿಸಿತ್ತು. ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಕಾನೂನು  ಇಲಾಖೆ ಅಧ್ಯಯನ ನಡೆಸುತ್ತಿದ್ದು, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಜಸ್ತಾನ ಗೃಹ ಸಚಿವ ಗುಲಾಬ್ ಚಂದ್ ಕಠಾರಿಯಾ ತಿಳಿಸಿದ್ದಾರೆ.

ಪದ್ಮಾವತ್ ಚಿತ್ರ ನಿಷೇಧಕ್ಕೆ ಆಗ್ರಹಿಸಿ ಸೆನ್ಸಾರ್ ಬೋರ್ಡ್ ಮುಂಭಾಗ ಕಳೆದ ವಾರ ಪ್ರತಿಭಟನೆ ನಡೆಸುತ್ತಿದ್ದ 132 ಮಂದಿ ರಜಪೂತ್ ಕರ್ನಿ ಸೇನಾ ಪ್ರತಿಭಟನಾಕಾರರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಕೆಲ ದಶ್ಯಗಳಿಗೆ ಕತ್ತರಿಹಾಕಿ, ಚಿತ್ರದ ಟೈಟಲ್ ನ್ನು ಬದಲಾಯಿಸಿ ಇದೇ 25ರಂದು   ಚಿತ್ರ ಬಿಡುಗಡೆ ಮಾಡುವಂತೆ ಸೆನ್ಸಾರ್ ಬೋರ್ಡ್ ಸೂಚಿಸಿತ್ತು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT