ಬಿಹಾರದ ಕಾಲಚಕ್ರ ಮೈದಾನ (ಸಾಂದರ್ಭಿಕ ಚಿತ್ರ) 
ದೇಶ

ಬೋಧ್ ಗಯಾದಲ್ಲಿ ಎರಡು ಬಾಂಬ್ ಪತ್ತೆ: ದಲೈಲಾಮಗೆ ಬಿಗಿ ಬಂದೋಬಸ್ತ್

ರಸಿದ್ಧ ಧಾರ್ಮಿಕ ಕೇಂದ್ರ ಬೋಧ್ ಗಯಾದಲ್ಲಿ ನಿನ್ನೆ ರಾತ್ರಿ ಎರಡು ಬಾಂಬ್ ಪತ್ತೆಯಾಗಿದ್ದು, ಬೌಧ ಧರ್ಮಗುರು ದಲೈಲಾಮ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರ: ಪ್ರಸಿದ್ಧ ಧಾರ್ಮಿಕ ಕೇಂದ್ರ ಬೋಧ್ ಗಯಾದಲ್ಲಿ ನಿನ್ನೆ ರಾತ್ರಿ ಎರಡು ಬಾಂಬ್  ಪತ್ತೆಯಾಗಿದ್ದು, ಬೌಧ ಧರ್ಮಗುರು ದಲೈಲಾಮ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಾಟ್ನಾ ಡಿಐಜಿ ವಿನಯ್ ಕುಮಾರ್ ನೇತೃತ್ವದ ಪೊಲೀಸರ ತಂಡ ಕಾಲಚಕ್ರ ಮೈದಾನದಲ್ಲಿ ಕೊಂಬಿಂಗ್ ಕಾರ್ಯಾಚರಣೆ ನಡೆಸುತ್ತಿರುವಾಗ  ಸುಧಾರಿತ ಪ್ರಮಾಣದ ಎರಡು ಬಾಂಬ್ ಮಾದರಿಯ ಸ್ಪೋಟಕಗಳು ಪತ್ತೆಯಾಗಿವೆ ಎಂದು ಪಾಟ್ನಾವಲಯದ ಐಜಿಪಿ ಎನ್. ಹೆಚ್. ಖಾನ್  ಹೇಳಿದ್ದಾರೆ.

ಕಾಲಚಕ್ರ ಮೈದಾನದಲ್ಲಿ ಟಿಬೆಟಿಯನ್ ಆಧ್ಯಾತ್ಮಿಕ ಚಿಂತಕ ದಲೈಲಾಮ ಅವರಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು,ಟಿಪ್ಪನ್ ಬಾಕ್ಸ್ ಮಾದರಿಯ ವಸ್ತುವಿನಲ್ಲಿ ಬಾಂಬ್ ಇಡಲಾಗಿತ್ತು,ಇದರಿಂದಾಗಿ ಭಕ್ತಾಧಿಗಳು ಕೆಲಕಾಲ ಆತಂಕಕ್ಕೊಳಗಾಗಿದ್ದರು ಎಂದು ಅವರು ಹೇಳಿದರು.

ದಲೈಲಾಮ ಅವರ ಭಾಷಣ ಮುಗಿದ ಕೂಡಲೇ ಬಾಂಬ್ ಸ್ಪೋಟಿಸುವ ಸಂಚು ಇದಾಗಿದ್ದು,  ಪರಿಶೀಲನೆ ವೇಳೆ ಸುಟ್ಟು ಹೋಗಿರುವ ಧರ್ಮೋಸ್ ಪ್ಲಾಸ್ಕ್ ವೊಂದು ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಈ ಮಧ್ಯೆ ವಿಧಿ ವಿಜ್ಞಾನ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಜನವರಿ 1 ರಲ್ಲೇ ದಲೈಲಾಮ ಬೋಧ್ ಗಯಾಕ್ಕೆ ಆಗಮಿಸಿದ್ದು, ಒಂದು ತಿಂಗಳ ಕಾಲ ಉಪನ್ಯಾಸ ನಡೆಸುವ ಸಾಧ್ಯತೆ ಇದೆ. ಇತ್ತೀಚಿಗೆಷ್ಟೇ ಬಿಹಾರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್,  ಹಾಲಿವುಡ್ ನಟ ರಿಚರ್ಡ್ ಗೆರ್  ಸೇರಿದಂತೆ ಹಲವು ಮಂದಿ ಗಣ್ಯರು ದಲೈಲಾಮ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದಿದ್ದರು.2013ರಲ್ಲಿ ಮಹಾಬೋದಿ ದೇವಾಲಯ ಬಳಿ ಸಂಭವಿಸಿದ್ದ ಬಾಂಬ್ ಸ್ಪೋಟದಲ್ಲಿ ಐವರು ನಾಗರಿಕರು ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT