ಕುಮಾರ್ ವಿಶ್ವಾಸ್ 
ದೇಶ

ಎಎಪಿ ಶಾಸಕರ ಲಾಭದಾಯಕ ಹುದ್ದೆ ಪ್ರಕರಣ: ದುರದೃಷ್ಟಕರ ಎಂದ ಕುಮಾರ್ ವಿಶ್ವಾಸ್

ಲಾಭದಾಯಕ ಹುದ್ದೆ ಹೊಂದಿದೆ ಆರೋಪದ ಮೇಲೆ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು...

ಅಹ್ಮದನಗರ: ಲಾಭದಾಯಕ ಹುದ್ದೆ ಹೊಂದಿದೆ ಆರೋಪದ ಮೇಲೆ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವುದು ದುರದೃಷ್ಟಕರ ಮತ್ತು ದುಃಖಕರ ಸಂಗತಿ ಎಂದು ಆಪ್ ನಾಯಕ ಕುಮಾರ್ ವಿಶ್ವಾಸ್ ಅವರು ಶನಿವಾರ ಹೇಳಿದ್ದಾರೆ.
'ಇದು ಅತ್ಯಂತ ದುರದೃಷ್ಟಕರ ಮತ್ತು ದುಃಖದ ವಿಚಾರ. ಈ ಹಿಂದೆ ಆಪ್ ಶಾಸಕರನ್ನು ಸಂಸದೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ವಿಚಾರದಲ್ಲಿ ನಾನು ಕೆಲವು ಸಲಹೆಗಳನ್ನು ನೀಡಿದ್ದೆ. ಆದರೆ ಅದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಹೇಳಿದ್ದರಿಂದ ನಾನು ಸುಮ್ಮನಾಗಿದ್ದೆ' ಎಂದು ಕುಮಾರ್ ವಿಶ್ವಾಸ್ ತಿಳಿಸಿದ್ದಾರೆ.
ಈ ಮಧ್ಯೆ, ಆಮ್ ಆದ್ಮಿ ಶಾಸಕರ ಲಾಭದಾಯಕ ಹುದ್ದೆ ವಿರುದ್ಧ ವಿರುದ್ಧ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದ ಪ್ರಶಾಂತ್ ಪಟೇಲ್ ಅವರು, 20 ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವ  ಚುನಾವಣಾ ಆಯೋಗದ ನಿರ್ಧಾರ ತಮಗೆ ತೃಪ್ತಿ ತಂದಿದೆ ಎಂದಿದ್ದಾರೆ.
ಚುನಾವಣಾ ಆಯೋಗ ನಿನ್ನೆ ಲಾಭದಾಯಕ ಹುದ್ದೆ ಹೊಂದಿರುವ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ಶಿಫಾರಸು ಮಾಡಿದೆ. ಇದನ್ನು ಪ್ರಶ್ನಿಸಿ ಆಪ್ ಶಾಸಕರು ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಹೈಕೋರ್ಟ್ ಆಯೋಗದಿಂದ ವರದಿ ಕೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT