ಸಂಗ್ರಹ ಚಿತ್ರ 
ದೇಶ

ಆಧಾರ್ ಮಾಹಿತಿ ಸೋರಿಕೆಗೆ ಸತತ ಪ್ರಯತ್ನ: ಯುಐಡಿಎಐ ಮುಖ್ಯಸ್ಥ

ವಿಶಿಷ್ಟ ಗುರುತಿನ ಚೀಟಿ ಆಧಾರ್ ನಲ್ಲಿನ ಮಾಹಿತಿ ಸೋರಿಕೆಗೆ ಸತತ ಪ್ರಯತ್ನಗಳು ನಡೆಯುತ್ತಿವೆ ಎಂದು ವಿಶಿಷ್ಠ ಗುರುತಿನ ಚೀಟಿ ಪ್ರಾಧಿಕಾರ ಯುಐಡಿಎಐ ಮುಖ್ಯಸ್ಥ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.

ನವದೆಹಲಿ: ವಿಶಿಷ್ಟ ಗುರುತಿನ ಚೀಟಿ ಆಧಾರ್ ನಲ್ಲಿನ ಮಾಹಿತಿ ಸೋರಿಕೆಗೆ ಸತತ ಪ್ರಯತ್ನಗಳು ನಡೆಯುತ್ತಿವೆ ಎಂದು ವಿಶಿಷ್ಠ ಗುರುತಿನ ಚೀಟಿ ಪ್ರಾಧಿಕಾರ ಯುಐಡಿಎಐ ಮುಖ್ಯಸ್ಥ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.
ಆಧಾರ್ ಮಾಹಿತಿ ಸೋರಿಕೆ ಸಂಬಂಧ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಚರ್ಚೆಗಳ ಹಿನ್ನಲೆಯಲ್ಲಿ ಮಾತನಾಡಿದ ಪಾಂಡೆ, ಆಧಾರ್ ಮಾಹಿತಿಗಳು ಸಂಪೂರ್ಣ ಸುರಕ್ಷತಿವಾಗಿದ್ದು, ಜನರು ಹೆದರುವ ಅಗತ್ಯವಿಲ್ಲ. ಆಧಾರ್  ದತ್ತಾಂಶ ಸಂಗ್ರಹಣೆ ಹಲವು ವಿವಿಧ ಸ್ಥರಗಳ ಭದ್ರತೆ ಹೊಂದಿದ್ದು, ಅವುಗಳ ಸೋರಿಕೆ ಅಸಾಧ್ಯ ಎಂದು ಹೇಳಿದ್ದಾರೆ. ಅಂತೆಯೇ ಯಾವುದೇ ರೀತಿಯ ಕಂಪ್ಯೂಟರ್ ತಜ್ಞರೂ ಕೂಡ ಆಧಾರ್ ಭದ್ರತೆಯನ್ನು ಭೇದಿಸಿ ಮಾಹಿತಿ  ಪಡೆಯಲು ಸಾಧ್ಯವಿಲ್ಲ ಎಂದು ಅವರು ವಿಶ್ವಾಸದಿಂದ ಹೇಳಿದ್ದಾರೆ.
ಇತ್ತೀಚೆಗಷ್ಟೇ ಕೇವಲ 500 ರು.ಗಳಿಗೆ ಆಧಾರ್ ಮಾಹಿತಿ ಮಾರಾಟಕ್ಕಿದೆ ಎಂದು ದಿ ಟ್ರಿಬ್ಯೂನ್ ಪತ್ರಿಕೆಯ ವರದಿಗಾರ್ತಿ ರಚನಾ ಖೈರಾ ಅವರು ವರದಿ ಮಾಡಿದ್ದರು. ಅಲ್ಲದೆ ದೇಶದ 119 ಕೋಟಿ ಭಾರತೀಯರ ಆಧಾರ್ ಮಾಹಿತಿ  ಕಳವಿನ ಕುರಿತು ಆತಂಕ ವ್ಯಕ್ತಪಡಿಸಿದ್ದರು. ಈ ಸುದ್ದಿ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿ, ಎಚ್ಚೆತ್ತುಕೊಂಡಿದ್ದ ಆಧಾರ್ ಸಂಸ್ಥೆ ವರದಿಗಾರ್ತಿ ವಿರುದ್ಧ ಎಫ್ ಐಆರ್ ಕೂಡ ದಾಖಲು ಮಾಡಿತ್ತು. ಇದರ ಬೆನ್ನಲ್ಲೇ ಆಧಾರ್  ಸಂಸ್ಥಾಪಕ ನಂದನ್ ನಿಲೇಕಣೆ ಅವರು ಮಾತನಾಡಿ, ಆಧಾರ್ ವ್ಯವಸ್ಥೆ ಅತ್ಯಂತ ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT